ಬ್ರೇಕಿಂಗ್ ನ್ಯೂಸ್
13-01-22 09:05 pm HK Desk news ದೇಶ - ವಿದೇಶ
ಕೊಲ್ಕತ್ತಾ, ಜ.13 : ಪಶ್ಚಿಮ ಬಂಗಾಳದ ಜಲಪಾಯಿ ಗುರಿ ಜಿಲ್ಲೆಯಲ್ಲಿ ಬಿಕಾನೇರ್ – ಗುವಾಹಟಿ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ್ದು, 12 ಬೋಗಿಗಳು ಉರುಳಿ ಬಿದ್ದು ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದಾರೆ. 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನದ ಬಿಕಾನೇರ್ ನಿಂದ ಹೊರಟಿದ್ದ ರೈಲು ಬಿಹಾರದ ಪಾಟ್ನಾ ಮೂಲಕ ಅಸ್ಸಾಮ್ ರಾಜಧಾನಿ ಗುವಾಹಟಿಗೆ ತೆರಳುತ್ತಿತ್ತು. ಪಶ್ಚಿಮ ಬಂಗಾಳ ರಾಜ್ಯದ ಜಲಪಾಯಿ ಗುರಿ ಜಿಲ್ಲೆಯ ಮೈನಾಗುರಿ ಎಂಬಲ್ಲಿಂದ ಸಾಗುತ್ತಿದ್ದಾಗ ಗುರುವಾರ ಸಂಜೆ 5.15 ಗಂಟೆಗೆ ರೈಲು ಹಳಿ ತಪ್ಪಿದ್ದು, ಒಂದರ ಮೇಲೊಂದು ಬಿದ್ದಿದೆ.
ರೈಲಿನಲ್ಲಿ ಸುಮಾರು 1200 ಪ್ರಯಾಣಿಕರು ಇದ್ದರು ಎನ್ನಲಾಗುತ್ತಿದೆ. ಬಿಕಾನೇರ್ ನಿಂದ 177 ಮಂದಿ ಪ್ರಯಾಣಿಸುತ್ತಿದ್ದರೆ ಪಾಟ್ನಾ ಜಂಕ್ಷನ್ನಿಂದ 98 ಮಂದಿ ರೈಲು ಹತ್ತಿದ್ದರು. ಹಲವಾರು ಮಂದಿ ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಅವರನ್ನು ಜಲಪಾಯಿಗುರಿ ಆಸ್ಪತ್ರೆಗೆ ಒಯ್ಯಲಾಗಿದೆ. ಸಿಲಿಗುರಿಯ ಎನ್ ಡಿಆರ್ ಎಫ್ ತಂಡ ಸ್ಥಳಕ್ಕಾಗಮಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಘಟನೆ ಬಗ್ಗೆ ನಿಗಾ ವಹಿಸಿದ್ದು, ಉನ್ನತ ಮಟ್ಟದ ತನಿಖೆಗೆ ಆದೇಶ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಘಟನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಜೊತೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ರೈಲ್ವೇ ಇಲಾಖೆ ಘೋಷಣೆ ಮಾಡಿದೆ.
As many as 12 bogies of the Bikaner-Guwahati Express have derailed in West Bengal's Jalpaiguri district. Five people have lost their lives in the accident. Rescue operations are underway.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm