ಬ್ರೇಕಿಂಗ್ ನ್ಯೂಸ್
14-01-22 09:44 pm HK Desk news ದೇಶ - ವಿದೇಶ
ನವದೆಹಲಿ, ಜ.14 : ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್ ವೇಯಲ್ಲಿ ಬಂದು ಕೆಲವೇ ಕ್ಷಣಗಳ ಅಂತರದಲ್ಲಿ ಅವಘಡದಿಂದ ತಪ್ಪಿದ ಘಟನೆ ನಡೆದಿದ್ದು ನೂರಾರು ಜನರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ದುಬೈಯಿಂದ ಹೈದರಾಬಾದ್ಗೆ ಒಂದು ಎಮಿರೇಟ್ಸ್ ವಿಮಾನ ಭಾನುವಾರ ರಾತ್ರಿ 9.45ಕ್ಕೆ ನಿರ್ಗಮಿಸಲಿದ್ದರೆ, ಬೆಂಗಳೂರಿಗೆ ಹೊರಟಿದ್ದ ಇನ್ನೊಂದು ವಿಮಾನ ಕೂಡ ಅದೇ ಸಮಯಕ್ಕೆ ಹಾರಾಟ ನಡೆಸಲು ಸಿದ್ಧವಾಗಿತ್ತು. ಐದು ನಿಮಿಷಗಳ ಅಂತರದಲ್ಲಿ ಈ ಎರಡೂ ವಿಮಾನಗಳು ಹಾರಾಟ ನಡೆಸಬೇಕಿತ್ತು.
ಆದರೆ ಎರಡೂ ವಿಮಾನಗಳು ಒಂದೇ ರನ್-ವೇ (30ಆರ್) ನಲ್ಲಿದ್ದವು. ಹೈದರಾಬಾದ್ಗೆ ಹೊರಟಿದ್ದ ವಿಮಾನವು ಟೇಕ್-ಆಫ್ಗೆ ಸಿದ್ಧತೆ ನಡೆಸುತ್ತಿದ್ದಂತೆಯೇ ಅದೇ ದಿಕ್ಕಿನಲ್ಲಿ ಭಾರೀ ವೇಗದಲ್ಲಿ ಇನ್ನೊಂದು ವಿಮಾನ ಬರುತ್ತಿರುವುದನ್ನು ಸಿಬ್ಬಂದಿ ಗಮನಿಸಿದ್ದರು. ಕೂಡಲೇ ಎಟಿಸಿಯಿಂದ ಟೇಕ್-ಆಫ್ ಮಾಡದಂತೆ ಹೈದರಾಬಾದ್ಗೆ ಹೊರಟಿದ್ದ ವಿಮಾನಕ್ಕೆ ಸೂಚನೆ ಲಭಿಸಿತು. ತಕ್ಷಣ ವಿಮಾನದ ವೇಗ ಕಡಿಮೆಗೊಳಿಸಿ, ಟ್ಯಾಕ್ಸಿವೇ ಎನ್4 ಮೂಲಕ ದೂರ ಸರಿದಿತ್ತು.
ಬೆಂಗಳೂರಿಗೆ ಹೊರಟಿದ್ದ ಎಮಿರೇಟ್ಸ್ ವಿಮಾನ ನಂತರ ಮೊದಲು ಟೇಕ್ ಆಫ್ ಮಾಡಿದರೆ ಹೈದರಾಬಾದ್ಗೆ ಹೊರಟ ವಿಮಾನ ಐದು ನಿಮಿಷದ ನಂತರ ನಿರ್ಗಮಿಸಿದೆ. ಈ ಲೋಪ ಸಾಕಷ್ಟು ಚರ್ಚೆಗೀಡಾಗಿದ್ದು ದುಬೈ ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
A massive collision between two India-bound Emirates planes that were scheduled to take off at a difference of five minutes was averted at Dubai airport saving hundreds of lives on Sunday. According to reports, the possible collision started while both flights, taking off from the Dubai airport, came on one runway.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm