ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm