ಬ್ರೇಕಿಂಗ್ ನ್ಯೂಸ್
17-01-22 09:42 pm HK News Desk ದೇಶ - ವಿದೇಶ
ಅಬುಧಾಬಿ, ಜ.17: ಯುಎಇ ದೇಶದ ರಾಜಧಾನಿ ಅಬುಧಾಬಿಯಲ್ಲಿ ಡ್ರೋಣ್ ದಾಳಿ ನಡೆದಿದ್ದು ಇಬ್ಬರು ಭಾರತೀಯರು ಸೇರಿದಂತೆ ಮೂರು ಮಂದಿ ಸಾವನ್ನಪ್ಪಿದ್ದಾರೆ.
ಅಬುಧಾಬಿಯ ಪ್ರಮುಖ ಏರ್ಪೋರ್ಟ್ ಮತ್ತು ಸ್ಥಳೀಯ ಮೂರು ತೈಲ ಸ್ಟೋರೇಜ್ ಟ್ಯಾಂಕರ್ ಗಳ ಮೇಲೆ ದಾಳಿ ನಡೆಸಲಾಗಿದೆ. ಈ ವೇಳೆ ಬೆಂಕಿ ಹತ್ತಿಕೊಂಡಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಮೂರು ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಭಾರತ ಮೂಲದವರು ಮತ್ತು ಒಬ್ಬ ಪಾಕಿಸ್ಥಾನಿ ಪ್ರಜೆ ಅನ್ನುವ ಬಗ್ಗೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತರ ಹೆಸರು ಇನ್ನೂ ಬಹಿರಂಗ ಆಗಿಲ್ಲ.
ಅಬುಧಾಬಿ ಸರಕಾರಿ ಅಧೀನದ ಮೂರು ತೈಲ ಸ್ಟೋರೇಜ್ ಟ್ಯಾಂಕ್ ಮೇಲೆ ದಾಳಿ ನಡೆದಿದೆ. ಯೆಮೆನ್ ಮೂಲದ ಹೌತಿ ಬಂಡುಕೋರರು ದಾಳಿ ನಡೆಸಿದ್ದಾರೆ ಎನ್ನುವ ಬಗ್ಗೆ ಮಾಹಿತಿಗಳಿವೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಹಾರುತ್ತಾ ಬಂದ ಡ್ರೋಣ್ ರೀತಿಯ ವಸ್ತು ಆಕಾಶದಲ್ಲಿ ಬಂದಿದ್ದು, ಆನಂತರ ಎರಡು ಕಡೆ ಸ್ಫೋಟಕ ವಸ್ತುವನ್ನು ಬೀಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಾರತೀಯ ರಾಯಭಾರ ಕಚೇರಿಯ ಸಂಜಯ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೂರು ಮಂದಿಯಲ್ಲಿ ಇಬ್ಬರು ಭಾರತೀಯರು ಇರುವುದು ದೃಢಪಟ್ಟಿದೆ. ನಾವು ಅಲ್ಲಿನ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಏರ್ಪೋರ್ಟ್ ನಲ್ಲಿ ಯಾವುದೇ ಸ್ಫೋಟ ಆಗಿಲ್ಲ. ಅಬುಧಾಬಿ ಸರಕಾರಿ ಅಧೀನದ ಆಯಿಲ್ ಸ್ಟೋರೇಜ್ ಯಾರ್ಡ್ ಬಳಿ ಸ್ಫೋಟ ನಡೆದಿದೆ. ಮುಸ್ಸಫಾ ಎಂಬ ಜಾಗದಲ್ಲಿ ಘಟನೆ ನಡೆದಿದ್ದು ಆರು ಮಂದಿ ಗಾಯಗೊಂಡಿದ್ದಾರೆ ತಿಳಿಸಿದ್ದಾರೆ.
Yemen's Houthi rebel group claimed responsibility for a "qualitative military operation" that struck areas deep inside the United Arab Emirates (UAE) in which three people were feared killed including two Indians. Six others were reportedly injured. Another person who died in the attack may be a Pakistani.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am