ಬ್ರೇಕಿಂಗ್ ನ್ಯೂಸ್
18-01-22 08:43 pm HK Desk news ದೇಶ - ವಿದೇಶ
ನವದೆಹಲಿ, ಜ.18 : ಕಾಶ್ಮೀರ ಕಣಿವೆ ಮತ್ತು ನಕ್ಸಲ್ ಪೀಡಿತ ಏರಿಯಾಗಳಲ್ಲಿ ಮುಂಚೂಣಿಯಾಗಿ ನಿಂತು ನೂರಾರು ಉಗ್ರರು ಮತ್ತು ನಕ್ಸಲರನ್ನು ಕೊಂದು ಹಾಕಿದ ಪರಿಣತಿ ಇರುವ ಸಿಆರ್ ಪಿಎಫ್ ಪಡೆಯ ಕ್ವಿಕ್ ಏಕ್ಷನ್ ಟೀಮ್ ಒಂದನ್ನು ರಾಜಧಾನಿ ದೆಹಲಿಯಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿದೆ.
ಆತ್ಮಹತ್ಯಾ ಬಾಂಬ್ ದಾಳಿ ಅಥವಾ ಯಾವುದೇ ರೀತಿಯ ವಿಧ್ವಂಸಕ ಕೃತ್ಯದ ಸಂದರ್ಭದಲ್ಲಿ ಕ್ಷಿಪ್ರವಾಗಿ ಕಾರ್ಯ ಎಸಗಬಲ್ಲ 50 ಮಂದಿಯ ಯೋಧರ ತಂಡ ಇದರಲ್ಲಿ ಇರಲಿದ್ದಾರೆ. ಕಾಶ್ಮೀರದಲ್ಲಿ ಈ ರೀತಿಯ ಕ್ವಿಕ್ ಏಕ್ಷನ್ ಟೀಮ್ ರೆಡಿ ಮಾಡಲಾಗಿತ್ತು. ಅದೇ ರೀತಿಯ ಮತ್ತೊಂದು ತಂಡವನ್ನು ರೆಡಿ ಮಾಡಲಾಗಿದ್ದು, ರಾಜಧಾನಿ ದೆಹಲಿಗೆ ನಿಯೋಜಿಸಲಾಗಿದೆ.
ತಂಡದಲ್ಲಿ 50 ಮಂದಿ ಯುವ ಪಡೆ ಇರಲಿದ್ದು, ಪ್ರತಿ ಯೋಧರು ಅತ್ಯಾಧುನಿಕ ರೈಫಲ್ಸ್ ಮತ್ತು ರಾತ್ರಿ- ಹಗಲು ಯಾವುದೇ ಸ್ಥಿತಿಯಲ್ಲೂ ಕೆಲಸ ಮಾಡಬಲ್ಲ ಮೆಷಿನರಿಯನ್ನು ಹೊಂದಿರುತ್ತಾರೆ. ಇದರಲ್ಲಿರುವ ಕಮಾಂಡೋಗಳು ಕಾಶ್ಮೀರದಲ್ಲಿ ಹಲವು ವರ್ಷಗಳಿಂದ ಹಿರಿಯ ಸೇನಾಧಿಕಾರಿಗಳಿಂದ ತರಬೇತಿ ಪಡೆದವರಾಗಿದ್ದು, ಐಇಡಿ ರೀತಿಯ ಸ್ಫೋಟಕಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯ ಹೊಂದಿರುತ್ತಾರೆ.
ಇದಲ್ಲದೆ, ಈ ಯೋಧರು ನಗರ ಪ್ರದೇಶಗಳಲ್ಲಿ ಯಾವ ರೀತಿ ಕಾರ್ಯ ನಿರತ ಆಗಬೇಕು ಮತ್ತು ಜನನಿಬಿಡ ಪ್ರದೇಶಗಳಲ್ಲಿ ದೊಡ್ಡ ಕಟ್ಟಡಗಳ ಮೇಲಿಂದ ಯಾವ ರೀತಿ ಕಾರ್ಯಾಚರಣೆ ನಡೆಸಬೇಕು ಎಂಬ ಬಗ್ಗೆಯೂ ತರಬೇತಿ ಪಡೆದಿದ್ದಾರೆ. ತಂಡದಲ್ಲಿ ಎಂಪಿ 5- ಮೆಷಿನ್ ಗನ್, ಸ್ನೈಫರ್ ರೈಫಲ್, ಲೈಟ್ ಮೆಷಿನ್ ಗನ್, ಎಕೆ-47, ಕಾರ್ನರ್ ಶಾಟ್ (ಗನ್ ಉಪಕರಣ), ಅಂಡರ್ ಬ್ಯಾರಲ್ ಗ್ರೆನೇಡ್ ಲಾಂಚರ್ಸ್ ಹೀಗೆ ಹಲವು ಶಸ್ತ್ರಾಸ್ತ್ರಗಳನ್ನು ಹೊಂದಿರುತ್ತಾರೆ. ಇದಲ್ಲದೆ, ರಾತ್ರಿ ವೇಳೆಯೂ ಕಾಣಬಲ್ಲ ನೈಟ್ ವಿಶನ್ ಗಾಗಲ್, ರಾಡಾರ್, ಸ್ಕ್ಯಾನರ್, ಶಸ್ತ್ರ ಸಜ್ಜಿತ ರೋಬೋಟ್ ಕೂಡ ಹೊಂದಿರುತ್ತಾರೆ.
ಗಣರಾಜ್ಯ ದಿನಕ್ಕೆ ದೆಹಲಿಯಲ್ಲಿ ಕಟ್ಟೆಚ್ಚರ ಘೋಷಣೆ ಮಾಡಿರುವುದರಿಂದ ಈ ಹೊಸ ತಂಡವನ್ನು ದೆಹಲಿಯ ಆಯಕಟ್ಟಿನ ಜಾಗಗಳಲ್ಲಿ ನಿಯೋಜನೆ ಮಾಡಲಾಗಿದೆ. ಇದಲ್ಲದೆ, ಸಂಸತ್ತಿನ ಆವರಣದಲ್ಲಿ ಮತ್ತು ಗಣ್ಯರ ಜೊತೆಗೆ ಹೆಚ್ಚುವರಿ ಸಿಆರ್ ಪಿಎಫ್ ಯೋಧರ ಪಡೆ ಇರಲಿದೆ. ಎನ್ಎಸ್ ಜಿ ಮಾದರಿಯಲ್ಲೇ ಮತ್ತೊಂದು ತಂಡವನ್ನು ದೆಹಲಿಗೆ ನಿಯೋಜನೆ ಮಾಡಲಾಗಿದೆ. ತಂಡದಲ್ಲಿ ಹಿಜ್ಬುಲ್ ಮುಜಾಹಿದೀನ್ ಮತ್ತು ಜೆಇಎಂ ಉಗ್ರರನ್ನು ಸದೆಬಡಿದು ವಿಶೇಷ ಪದಕ ಪಡೆದಿರುವ ಯೋಧರು ಇದ್ದಾರೆ.
Fifty handpicked commandos from the Central Reserve Police Force (CRPF), awarded for eliminating hundreds of terrorists in Kashmir and Naxals in red zones, will now be the prime responders in case of any terror or suicide attack in and around the national capital.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 02:39 pm
HK News Staffer
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
Pakistan News, Fuel Crisis: ಇಂಧನ ಬಿಕ್ಕಟ್ಟು ;...
07-04-26 08:01 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 01:06 pm
HK News Staffer
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm
ಚಿಕ್ಕಮಗಳೂರು ; ಭದ್ರಾ ನದಿಗೆ ಹಾರಿ ಶಿವಮೊಗ್ಗದ ನರ್ಸ...
07-04-26 04:04 pm
ಪೊಲೀಸ್ ಕಸ್ಟಡಿಯಲ್ಲಿದ್ದ ತಂದೆ-ಮಗನಿಗೆ ಚಿತ್ರಹಿಂಸೆ...
07-04-26 10:08 am