ಬ್ರೇಕಿಂಗ್ ನ್ಯೂಸ್
17-09-20 11:20 am Headline Karnataka News Network ದೇಶ - ವಿದೇಶ
ಶ್ರೀನಗರ, ಸೆಪ್ಟಂಬರ್ 17: ಇಂದು ನಸುಕಿನಲ್ಲಿಯೇ ಭಾರತೀಯ ಯೋಧರು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಶ್ರೀನಗರದ ಬಟಾಮಲು ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಭಯೋತ್ಪಾದಕರು ಅವಿತಿರುವ ಮಾಹಿತಿ ಪಡೆದ ಪೊಲೀಸರು ಮತ್ತು ಸಿಆರ್ಎಫ್ ಯೋಧರು ಉಗ್ರರ ಬೇಟೆ ಮಾಡಿದ್ದಾರೆ.
ಇಂದು ಮುಂಜಾನೆ 2.30ರ ಸುಮಾರಿಗೆ ಬಟಮಾಲೂ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಭದ್ರತಾ ಪಡೆಗಳು ಬಟಮಾಲೂನ ಫಿರ್ದೌಸಾಬಾದ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಈ ಕಾರ್ಯಚರಣೆ ಇನ್ನೂ ನಡೆಯುತ್ತಿದೆ.
ಈ ವೇಳೆ ಭಾರತೀಯ ಸೈನಿಕರು ಭಯೋತ್ಪಾದಕರ ಅಡಗು ತಾಣದ ಬಳಿ ಹೋಗುತ್ತಿದಂತೆ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ವೇಳೆ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಎನ್ಕೌಂಟರ್ ಅಲ್ಲಿ ಮೂವರು ಉಗ್ರರು ಸಾವನ್ನಪ್ಪಿದ್ದಾರೆ. ಜೊತೆಗೆ ಕಾರ್ಯಚರಣೆ ವೇಳೆ ಓರ್ವ ಮಹಿಳೆ ಕೂಡ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಇಬ್ಬರು ಯೋಧರಿಗೆ ಗಾಯಗೊಂಡಿದ್ದು, ಅವರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಕೂಡ ಪುಲ್ವಾಮದಲ್ಲಿ ಉಗ್ರರು ಮತ್ತು ಸೈನಿಕರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಸೆಪ್ಟೆಂಬರ್ 4ರಂದು ಬಾರಾಮುಲ್ಲಾ ಜಿಲ್ಲೆಯ ಯೆಡಿಪೋರಾ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಭದ್ರತಾ ಪಡೆಗಳು ಕೊಂದು ಹಾಕಿದ್ದವು. ಜೊತೆಗೆ ಭಯೋತ್ಪಾದಕರಿಂದ ಎರಡು ಎಕೆ-47 ರೈಫಲ್ಗಳು, ಎರಡು ಬುಲೆಟ್ ಜ್ಯಾಕೆಟ್ ಮತ್ತು ಒಂದು ಪಿಸ್ತೂಲ್ ವಶಪಡಿಸಿಕೊಳ್ಳಲಾಗಿತ್ತು.
ಜಮ್ಮು-ಕಾಸ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಬಳಿ ಪಾಕಿಸ್ತಾನ ಇಂದು ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ. ಈ ರೀತಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಉಗ್ರರು ಭಾರತದ ಒಳಗೆ ನುಸುಳಲು ಪಾಕಿಸ್ತಾನ ಸೇನೆ ಸಹಾಯ ಮಾಡುತ್ತಿದೆ. 2014ರಿಂದ ಪಾಕಿಸ್ತಾನ ಮಾಡಿದ ದಾಳಿಗೆ ಭಾರತೀಯ ಸೇನೆಯ 75 ಯೋಧರು ಹುತಾತ್ಮರಾಗಿದ್ದಾರೆ ಎಂದು ರಕ್ಷಣಾ ರಾಜ್ಯ ಸಚಿವ ಶ್ರೀಪಾದ್ ನಾಯಕ್ ತಿಳಿಸಿದ್ದಾರೆ.
Jammu and Kashmir: Three terrorists neutralised in encounter with security forces in Batamaloo area of Srinagar
— ANI (@ANI) September 17, 2020
(visuals deferred by unspecified time) pic.twitter.com/1vo56F3Luh
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm