ಬ್ರೇಕಿಂಗ್ ನ್ಯೂಸ್
01-02-22 01:27 pm HK Desk news ದೇಶ - ವಿದೇಶ
ನವದೆಹಲಿ, ಫೆ 01: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡುಬಂದಿದ್ದು, 19 ಕೆಜಿಯ ಪ್ರತೀ ಸಿಲಿಂಡರ್ ಬೆಲೆಯಲ್ಲಿ 91.50 ರೂ. ಇಳಿಕೆ ಮಾಡಲಾಗಿದೆ.
ಎಲ್ಪಿಜಿ ಸಿಲಿಂಡರ್ಗಳ ನವೀಕೃತ ಬೆಲೆಯನ್ನು ತೈಲು ಮಾರುಕಟ್ಟೆ ಕಂಪನಿಗಳು (OMCs)ಬಿಡುಗಡೆ ಮಾಡಿದ್ದು, 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು 91.50 ರೂಪಾಯಿ ಇಳಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,907 ರೂಪಾಯಿ ಆಗಿದೆ.
ಡಿಸೆಂಬರ್ವರೆಗೂ ಒಂದೇ ಸಮನೆ ಏರಿಕೆಯಾಗುತ್ತಿದ್ದ ಕಮರ್ಷಿಯಲ್ ಸಿಲಿಂಡರ್ ಬೆಲೆ ಜನವರಿಯಲ್ಲಿ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ ಫೆಬ್ರವರಿಯಲ್ಲಿ ಕೂಡ ಕಡಿತಗೊಂಡಿದ್ದು ಗ್ರಾಹಕರು ಅಂದರೆ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನಿರಾಳತೆ ಮೂಡಿಸಿದೆ.
ಡಿಸೆಂಬರ್ 1ರಂದು 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಏರಿಕೆಯಾಗಿತ್ತು. ಅಲ್ಲಿಗೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ 2101 ರೂಪಾಯಿ ಆಗಿತ್ತು. ಡಿಸೆಂಬರ್ನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ದೆಹಲಿಯಲ್ಲಿ 2101 ರೂಪಾಯಿ ಆಗಿದ್ದು ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿತ್ತು. 2012-13ರಲ್ಲಿ 2,200ರೂ.ಗೆ ತಲುಪಿದ ಮೇಲೆ ಅಷ್ಟೆಲ್ಲ ಏರಿಕೆಯಾಗಿರಲಿಲ್ಲ.
ಆದರೆ ಜನವರಿ 1 ರಂದು ತೈಲ ಮಾರುಕಟ್ಟೆ ಕಂಪನಿಗಳು 102.50 ರೂಪಾಯಿ ಕಡಿತಗೊಳಿಸಿದರೂ, ಸಿಲಿಂಡರ್ ಬೆಲೆ 2 ಸಾವಿರ ರೂಪಾಯಿ ಮೇಲ್ಪಟ್ಟೇ ಇತ್ತು. ಇನ್ನು ಸಬ್ಸಿಡಿ ರಹಿತ (14.KG) ಇಂಡೇನ್ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 899.50 ರೂಪಾಯಿ ಇದೆ. ಮುಂಬೈನಲ್ಲಿ ಈ ಬೆಲೆ ದೆಹಲಿಯಲ್ಲದ್ದಷ್ಟೇ ಇದ್ದರೆ, ಕೋಲ್ಕತ್ತದಲ್ಲಿ 14 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 926 ರೂಪಾಯಿ ಇದೆ ಎಂದು ತಿಳಿದುಬಂದಿದೆ.
LPG Cylinder Rates- Hours ahead of Union Budget 2022, when Finance Minister Nirmala Sitharaman is ready for presenting the paperless budget in the parliament today. In a big relief to all, the prices of LPG Cylinders have been slashed.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm