ಬ್ರೇಕಿಂಗ್ ನ್ಯೂಸ್
03-02-22 09:50 pm HK Desk news ದೇಶ - ವಿದೇಶ
ಲಕ್ನೋ, ಫೆ.2 : ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣೆಗೆ ತಯಾರಿ ನಡೆದಿದೆ. ಫೆ.10ರಂದು 11 ಜಿಲ್ಲೆಗಳ ವ್ಯಾಪ್ತಿಯ 58 ಕ್ಷೇತ್ರಗಳಿಗೆ ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ 156 ಮಂದಿ ಅಪರಾಧ ಹಿನ್ನೆಲೆಯವರಿದ್ದಾರೆ. ಅದರಲ್ಲೂ 121 ಮಂದಿ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಮೊದಲ ಹಂತದಲ್ಲಿ 58 ಕ್ಷೇತ್ರಗಳಲ್ಲಿ 615 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಆ ಪೈಕಿ 156 (25 ಶೇ.) ಮಂದಿ ತಮ್ಮ ಅಫಿಡವಿಟ್ ನಲ್ಲಿ ಕ್ರಿಮಿನಲ್ ಕೇಸು ಇರುವ ಬಗ್ಗೆ ಹೇಳಿಕೊಂಡಿದ್ದಾರೆ. 121 ಮಂದಿ ಗಂಭೀರ ಕ್ರಿಮಿನಲ್ ಕೇಸು ಎದುರಿಸುತ್ತಿರುವುದಾಗಿ ಹೇಳಿದ್ದಾರೆ. ಈ ಪೈಕಿ 12 ಮಂದಿ ಮಹಿಳೆಯರ ಮೇಲಿನ ಕಿರುಕುಳ ಪ್ರಕರಣ ಎದುರಿಸುತ್ತಿದ್ದರೆ, ಒಬ್ಬ ಆರ್ ಎಲ್ ಡಿಯಿಂದ ಸ್ಪರ್ಧಿಸುವ ಮೊಹಮ್ಮದ್ ಯೂನುಸ್ ಅತ್ಯಾಚಾರ ಪ್ರಕರಣದ ಆರೋಪಿ. ಆರು ಮಂದಿ ಅಭ್ಯರ್ಥಿಗಳ ವಿರುದ್ಧ ಕೊಲೆ ಪ್ರಕರಣ, 30 ಮಂದಿ ವಿರುದ್ಧ ಕೊಲೆಯತ್ನ ಪ್ರಕರಣಗಳಿವೆ.
ಒಟ್ಟು 58 ಕ್ಷೇತ್ರಗಳ ಪೈಕಿ 31 ಕ್ಷೇತ್ರಗಳು ರೆಡ್ ಎಲರ್ಟ್ ಎದುರಿಸುತ್ತಿವೆ. ಇಲ್ಲೆಲ್ಲ ಮೂರರಿಂದ ನಾಲ್ಕು ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಎದುರಿಸುತ್ತಿದ್ದಾರೆ. ಮೀರಜ್ ಜಿಲ್ಲೆಯ ಶಿವಲ್ಕಾಸ್ ಕ್ಷೇತ್ರ ಮತ್ತು ಆಗ್ರಾ ಜಿಲ್ಲೆಯ ಖೇರಾಗಾತ್ ಕ್ಷೇತ್ರದಲ್ಲಿ ತಲಾ ಆರು ಮಂದಿ ಕ್ರಿಮಿನಲ್ ಗಳು ಕಣದಲ್ಲಿದ್ದಾರೆ. ಹಾಪುರ್ ಜಿಲ್ಲೆಯ ಧೋಲಾನಾ, ಗಾಜಿಯಾಬಾದ್ ಜಿಲ್ಲೆಯ ಲೋನಿ, ಶಾಮ್ಲಿಯ ಥಾನಾ ಭವನ್ ಮತ್ತು ಮೀರತ್ ಕ್ಷೇತ್ರದಲ್ಲಿ ತಲಾ ಐದು ಮಂದಿ ಕ್ರಿಮಿನಲ್ ಅಭ್ಯರ್ಥಿಗಳಿದ್ದಾರೆ. ಈ ಪೈಕಿ ಸಮಾಜವಾದಿ ಪಾರ್ಟಿಯ 75 ಶೇ. ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನೆಲೆಯವರು. ಆನಂತರ ಆರ್ ಎಲ್ ಡಿ ಪಕ್ಷದವರು ಹೆಚ್ಚಿದ್ದಾರೆ. ಸಮಾಜವಾದಿಯ 28 ಅಭ್ಯರ್ಥಿಗಳಲ್ಲಿ 21, ಆರ್ ಎಲ್ ಡಿ ಪಕ್ಷದ 29 ಮಂದಿಯಲ್ಲಿ 17 ಮತ್ತು ಬಿಜೆಪಿಯ 59 ಅಭ್ಯರ್ಥಿಗಳಲ್ಲಿ 29 ಮಂದಿ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ. ಕಾಂಗ್ರೆಸಿನ 58 ಮಂದಿಯಲ್ಲಿ 21 ಮಂದಿ ಕ್ರಿಮಿನಲ್ ಹಿನ್ನೆಲೆಯವರಿದ್ದಾರೆ.
UP elections 2022, As per a report by Uttar Pradesh Election Watch and Association for Democratic Reforms, 121 candidates in Phase 1 have declared serious criminal cases against themselves in their affidavits.
10-04-26 03:25 pm
HK News Desk
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
10-04-26 01:26 pm
HK News Desk
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm