ಬ್ರೇಕಿಂಗ್ ನ್ಯೂಸ್
06-02-22 11:46 am HK Desk news ದೇಶ - ವಿದೇಶ
ಮುಂಬೈ, ಫೆ.6 : ಗಾಯನ ಲೋಕದ ದಂತಕತೆ, ಗಾನ ಸಾಮ್ರಾಜ್ಞಿ, ಭಾರತದ ಗಾನ ಕೋಗಿಲೆ ಎಂದೇ ಹೆಸರುವಾಸಿಯಾಗಿದ್ದ ಭಾರತ ರತ್ನ ಲತಾ ಮಂಗೇಶ್ಕರ್ ಇನ್ನಿಲ್ಲ. ತಮ್ಮ 92ರ ತುಂಬು ವಯಸ್ಸಿನಲ್ಲಿ ಲತಾ ಮಂಗೇಶ್ಕರ್ ಇಹಲೋಕ ತ್ಯಜಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಅವರು ಇಂದು ಬೆಳಗ್ಗೆ 8 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ಕೆಲವು ದಿನಗಳ ಹಿಂದೆ ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಉತ್ತಮಗೊಂಡಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಲತಾ ಗಂಭೀರ ಸ್ಥಿತಿಯಲ್ಲಿದ್ದರೂ, ಮತ್ತೆ ಸಾವಿನ ದವಡೆಯಿಂದ ಬದುಕಿ ಬರುತ್ತಾರೆಂದೇ ಅಭಿಮಾನಿಗಳು ನಂಬಿದ್ದರು. ಆದರೆ ಶನಿವಾರ ಮತ್ತೆ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಇಂದು ಬೆಳಗ್ಗೆ 8.12 ಗಂಟೆಗೆ ಸಾವನ್ನಪ್ಪಿರುವುದನ್ನು ಅವರ ಸೋದರಿ ಉಷಾ ಮಂಗೇಶ್ಕರ್ ದೃಢಪಡಿಸಿದ್ದಾರೆ. ಲತಾ ಮಂಗೇಶ್ಕರ್ ನಿಧನದಿಂದಾಗಿ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ ಮಾಡಲಾಗಿದೆ. ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಇಳಿಸಿ, ಅಗಲಿದ ಗಾಯನ ಲೋಕದ ದಂತಕತೆಗೆ ಗೌರವ ಸೂಚಿಸಲು ಕೇಂದ್ರ ಸರಕಾರ ಆದೇಶ ಮಾಡಿದೆ. ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ 4.30ಕ್ಕೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಕೋವಿಡ್ ಸೋಂಕಿನ ಜೊತೆಗೆ ನ್ಯುಮೋನಿಯಾ ಕೂಡ ಇದ್ದುದರಿಂದ ಶನಿವಾರ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗಿತ್ತು. ಆದರೆ, ಇಂದು ಬೆಳಗ್ಗೆ ಬಹು ಅಂಗಾಂಗ ವೈಫಲ್ಯದಿಂದಾಗಿ ಲತಾ ದೀ ಮೃತಪಟ್ಟಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿದ್ದ ವೈದ್ಯರು ತಿಳಿಸಿದ್ದಾರೆ. ಆರೋಗ್ಯ ಸ್ಥಿತಿ ತೀವ್ರ ಬಿಗಡಾಯಿಸಿದ್ದರಿಂದ ಶನಿವಾರ ಅವರನ್ನು ಕಾಣಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ಹಲವು ಗಣ್ಯರು ಬಂದಿದ್ದರು.

ಏಳು ದಶಕಗಳ ಸುದೀರ್ಘ ಗಾಯನ ಲೋಕದಲ್ಲಿ ಲತಾ ಮಂಗೇಶ್ಕರ್ ದೇಶಭಕ್ತಿ ಗೀತೆಗಳಿಂದ ತೊಡಗಿ ಬಾಲಿವುಡ್ ಸೇರಿದಂತೆ ಬಹುತೇಕ ಎಲ್ಲ ಭಾಷೆಗಳ ಸಿನಿಮಾಗಳಲ್ಲಿ ಧ್ವನಿಯಾಗಿದ್ದರು. ಆಯೆ ಮೇರೆ ವತನ್ ಕೇ ಲೋಗೊ, ಲಾಗ್ ಜಾ ಗಲೇ, ಯೇ ಕಹಾಂ ಆಗೇ ಹೇ ಹಮ್, ಪ್ಯಾರ್ ಕಿಯಾ ತೋ ಡರ್ ನಾ ಕ್ಯಾ ಹೀಗೆ ಹಲವಾರು ಆಲ್ಬಂ ಸಾಂಗ್ ಗಳು ಭಾರೀ ಜನಪ್ರಿಯತೆ ಕಂಡಿದ್ದವು. ದೇಶದ ಅತ್ಯುನ್ನತ ಗೌರವಗಳಾದ ಭಾರತ ರತ್ನ, ಪದ್ಮಭೂಷಣ, ಪದ್ಮಶ್ರೀ, ದಾದಾ ಸಾಹೇಬ್ ಫಾಲ್ಕೆ ಸೇರಿದಂತೆ ಎಲ್ಲ ರೀತಿಯ ಗೌರವಗಳು ಸಂದಿದ್ದವು. ಪ್ರಧಾನಿ ಮೋದಿ ಸೇರಿದಂತೆ ಬಾಲಿವುಡ್, ದಕ್ಷಿಣ ಭಾರತದ ಎಲ್ಲ ಚಿತ್ರರಂಗದ ತಾರೆಯರು ತೀವ್ರ ಕಂಬನಿ ಮಿಡಿದಿದ್ದಾರೆ.
I am anguished beyond words. The kind and caring Lata Didi has left us. She leaves a void in our nation that cannot be filled. The coming generations will remember her as a stalwart of Indian culture, whose melodious voice had an unparalleled ability to mesmerise people. pic.twitter.com/MTQ6TK1mSO
— Narendra Modi (@narendramodi) February 6, 2022
Lata Didi’s songs brought out a variety of emotions. She closely witnessed the transitions of the Indian film world for decades. Beyond films, she was always passionate about India’s growth. She always wanted to see a strong and developed India. pic.twitter.com/N0chZbBcX6
— Narendra Modi (@narendramodi) February 6, 2022
I consider it my honour that I have always received immense affection from Lata Didi. My interactions with her will remain unforgettable. I grieve with my fellow Indians on the passing away of Lata Didi. Spoke to her family and expressed condolences. Om Shanti.
— Narendra Modi (@narendramodi) February 6, 2022
It's a sad day for the Indian film industry as it has lost one of its legends! Legendary singer Lata Mangeshkar breathed her last due to multiple organ failure on Sunday (February 6) leaving the entire nation in sorrow. She was 92. The news of her passing away was confirmed by her sister Usha Mangeshkar.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm