ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm