ಬ್ರೇಕಿಂಗ್ ನ್ಯೂಸ್
07-02-22 08:34 pm HK Desk news ದೇಶ - ವಿದೇಶ
ನವದೆಹಲಿ, ಫೆ.7 : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡುವ ಬಗ್ಗೆ ಕರ್ನಾಟಕ ಸರಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸಂಸತ್ತಿನಲ್ಲಿ ನಾಗರಿಕ ವಿಮಾನ ಯಾನ ಸಚಿವಾಲಯದ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದ್ದಾರೆ.
ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಹೊಸ ನಾಮಕರಣ ಮಾಡಬೇಕೆಂಬ ಪ್ರಸ್ತಾಪ ಕೇಳಿಬರುತ್ತಿದೆ. ಸ್ಥಳೀಯವಾಗಿ ಹಲವು ಮಹಾನುಭಾವರ ಹೆಸರುಗಳನ್ನು ನಾಮಕರಣ ಮಾಡುವ ಬಗ್ಗೆ ಬೇಡಿಕೆ ಮುಂದಿಡಲಾಗಿದೆ. ಈ ಬಗ್ಗೆ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಸಂಸದ ಡಾ.ಸುಬ್ರಹ್ಮಣ್ಯಸ್ವಾಮಿ ಫೆ.7ರಂದು ಸಂಸತ್ತಿನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ವಿ.ಕೆ.ಸಿಂಗ್, ಯಾವುದೇ ನಾಮಕರಣ ಮಾಡುವುದು, ಹೊಸ ಹೆಸರಿಡುವುದಕ್ಕೂ ಮೊದಲು ಆಯಾ ರಾಜ್ಯ ಸರಕಾರಗಳಿಂದ ಪ್ರಸ್ತಾವನೆ ಬರಬೇಕು. ಆಯಾ ರಾಜ್ಯಗಳ ಅಸೆಂಬ್ಲಿಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಕೇಂದ್ರಕ್ಕೆ ಸಲ್ಲಿಸಬೇಕು. ಆದರೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೊಸ ಹೆಸರಿಡುವ ಬಗ್ಗೆ ಯಾವುದೇ ಪ್ರಸ್ತಾವನೆ ಕರ್ನಾಟಕ ಸರಕಾರದಿಂದ ಕೇಂದ್ರಕ್ಕೆ ಸಲ್ಲಿಕೆ ಆಗಿಲ್ಲ. ಹೊಸ ನಾಮಕರಣ ಮಾಡುವುದಿದ್ದರೆ ಕೇಂದ್ರ ಸಚಿವ ಸಂಪುಟ, ಆಯಾ ಇಲಾಖೆಗಳ ಅಭಿಪ್ರಾಯ ಪಡೆದು ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಕಳೆದ ಹಲವು ವರ್ಷಗಳಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ ಹೆಸರಿಡಬೇಕು. ಅಥವಾ ಇತರ ಸಾಧಕರ ಹೆಸರನ್ನು ಇಡಬೇಕು ಎಂಬ ಬಗ್ಗೆ ಅಭಿಯಾನ ನಡೆದಿತ್ತು. ಅಂಥ ಸಂದರ್ಭದಲ್ಲಿ ಈ ಭಾಗದ ಪ್ರಭಾವಿ ಮುಖಂಡರು ಸೇರಿದಂತೆ ಸಂಸದ ನಳಿನ್ ಕುಮಾರ್ ಈ ಬಗ್ಗೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆ ಕಳುಹಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಈ ಎಲ್ಲ ನಾಯಕರು ನೀಡಿದ್ದ ಹೇಳಿಕೆಗಳು ಸುಳ್ಳು ಎನ್ನುವುದು ಈಗ ಖಚಿತವಾಗಿದೆ.
Proposals for naming/ renaming airports is based on the recommendations of the state government concerned, he said. The Civil Aviation Ministry has stated that it has not received any proposal from the Karnataka government to rename Mangaluru airport.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 04:26 pm
Udupi Correspondent
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm