ಬ್ರೇಕಿಂಗ್ ನ್ಯೂಸ್
18-09-20 04:16 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 18: ಗೂಗಲ್ ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆ್ಯಪ್ ದಿಢೀರ್ ಆಗಿ ಮಾಯವಾಗಿದೆ. ಪ್ಲೇ ಸ್ಟೋರ್ ನಿಂದ ಪೇಟಿಎಂ ತೆಗೆದು ಹಾಕಿದ್ದರ ಬಗ್ಗೆ ಗೂಗಲ್ ಅಧಿಕೃತವಾಗಿ ಯಾವುದೇ ಕಾರಣ ಕೊಟ್ಟಿಲ್ಲ.
ಪೇಟಿಎಂಗೆ ಭಾರತದಲ್ಲಿ ಲಕ್ಷಾಂತರ ಬಳಕೆದಾರರಿದ್ದಾರೆ. ಇದೀಗ ಆ್ಯಪ್ ಅನ್ನು ಗೂಗಲ್ ನಿಂದ ತೆಗೆದು ಹಾಕಿರುವುದು ಮುಂದೆ ನಿಷೇಧಕ್ಕೆ ಒಳಗಾಗಬಹುದೇ ಎನ್ನುವ ಅನುಮಾನ ಮೂಡಿದೆ. ಮೂಲಗಳ ಪ್ರಕಾರ, ಪೇಟಿಎಂ ಆ್ಯಪ್ ಆನ್ ಲೈನ್ ಜೂಜಿನ ಆಟಗಳಿಗೆ ಹೆಚ್ಚು ಬಳಕೆಯಾಗುತ್ತಿದೆ. ಗೂಗಲ್ ನ ಗ್ಯಾಂಬ್ಲಿಂಗ್ ಪಾಲಿಸಿಯನ್ನು ಉಲ್ಲಂಘಿಸಿದ್ದಕ್ಕಾಗಿ ಪೇಟಿಎಂ ಮೇಲೆ ತೂಗುಕತ್ತಿ ವಿಧಿಸಿದೆ ಎನ್ನಲಾಗ್ತಿದೆ.
ಆದರೆ, ಪ್ಲೇ ಸ್ಟೋರ್ ನಲ್ಲಿ ಪೇಟಿಎಂ ಆಧರಿತ ಪೇಟಿಎಂ ಫೊರ್ ಬ್ಯುಸಿನೆಸ್, ಪೇಟಿಎಂ ಫೊರ್ ಮನಿ ಹಾಗು ಪೇಟಿಎಂಗೆ ಸಂಬಂಧಿಸಿದ ಇತರ ಆ್ಯಪ್ ಗಳು ಈಗಲೂ ಲಭ್ಯವಿದೆ. ಇನ್ನು ಆ್ಯಪಲ್ ಆ್ಯಪ್ ಸ್ಟೋರ್ ನಲ್ಲಿ ಸದ್ಯ ಪೇಟಿಎಂ ಲಭ್ಯವಿದೆ.

ಗೂಗಲ್ ಬ್ಲಾಗ್ ಸ್ಪಾಟ್ ನಲ್ಲಿರುವ ಮಾಹಿತಿ ಪ್ರಕಾರ, ಯಾವುದೇ ಆ್ಯಪ್ ಗೂಗಲ್ ನೀತಿಗಳನ್ನು ಉಲ್ಲಂಘಿಸಿದರೆ ಡೆವಲಪರ್ ಗಳಿಗೆ ಮಾಹಿತಿ ನೀಡಿ, ಆ್ಯಪನ್ನು ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದು ಹಾಕುತ್ತೇವೆ. ಬಳಿಕ ನಿಯಮ ಅನುಸರಿಸಿಕೊಂಡಲ್ಲಿ ಗೂಗಲ್ ಸ್ಟೋರ್ ನಲ್ಲಿ ಸೇರಿಸಿಕೊಳ್ಳಲು ಅವಕಾಶ ಇರುತ್ತದೆ ಎಂದಿದೆ. ಆದರೆ ಈ ಹೇಳಿಕೆಯಲ್ಲಿ ಪೇಟಿಎಮ್ ಆ್ಯಪ್ ಬಗ್ಗೆ ಗೂಗಲ್ ಯಾವುದೇ ರೀತಿಯ ಉಲ್ಲೇಖ ಮಾಡಿಲ್ಲ.
ಎರಡು ದಿನಗಳ ಹಿಂದಷ್ಟೇ ಭಾರತದ ಸಂಸತ್ತಿನಲ್ಲಿ ಆನ್ಲೈನ್ ಜೂಜುಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ ಕೇಳಿಬಂದಿತ್ತು. ಆನ್ಲೈನ್ ರಮ್ಮಿಯಂತಹ ಆಟಗಳನ್ನು ನಿಷೇಧಿಸುವಂತೆ ಸಂಸದರು ಒತ್ತಾಯಿಸಿದ್ದರು. ಈ ಜೂಜಾಟಗಳಿಗೆ ಪೇಟಿಎಂ ಬಳಕೆ ಆಗುತ್ತಿದ್ದ ಬಗ್ಗೆ ಮಾಹಿತಿಗಳಿದ್ದವು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am