ಬ್ರೇಕಿಂಗ್ ನ್ಯೂಸ್
18-09-20 05:34 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 18: ಚೀನಾ ಗೂಢಚರರು ಪ್ರಧಾನಿ ಮೋದಿ, ರಾಜನಾಥ್ ಸೇರಿದಂತೆ ದೇಶದ ವಿವಿಐಪಿಗಳ ಚಲನವಲನಗಳ ಬಗ್ಗೆ ಕಣ್ಣಿಟ್ಟಿದ್ದಾರೆ ಎಂಬ ಮಾಹಿತಿಗಳ ನಡುವೆಯೇ ಈಗ ದೇಶದ ಮಹತ್ವದ ವಿಚಾರಗಳನ್ನು ಕಾಯ್ದಿಟ್ಟುಕೊಳ್ಳುವ ನ್ಯಾಶನಲ್ ಇನ್ಫಾರ್ಮೆಟಿಕ್ ಸೆಂಟರ್ (ಎನ್ಐಸಿ) ಮೇಲೆ ಸೈಬರ್ ಅಟ್ಯಾಕ್ ಆಗಿದೆ. ಸೆಂಟರಿನ ಹಲವು ಕಂಪ್ಯೂಟರ್ ಗಳು ಹ್ಯಾಕ್ ಆಗಿದ್ದು, ಮಹತ್ವದ ವಿಚಾರಗಳನ್ನು ಕದಿಯಲಾಗಿದೆ ಎನ್ನುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ದೆಹಲಿ ಪೊಲೀಸರು ಸೈಬರ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಪ್ರಧಾನ ಮಂತ್ರಿ ಮತ್ತು ರಾಷ್ಟ್ರೀಯ ಭದ್ರತಾ ಕಾರ್ಯಾಲಯ ಸೇರಿದಂತೆ ಭದ್ರತೆಗೆ ಸಂಬಂಧಿಸಿದ ವಿಐಪಿಗಳ ಮಾಹಿತಿಗಳು ನ್ಯಾಶನಲ್ ಇನ್ಫಾರ್ಮೆಟಿಕ್ ಸೆಂಟರ್ ನಲ್ಲಿ ಇರುತ್ತವೆ. ಇಂಥ ಕೇಂದ್ರಕ್ಕೆ ಸೈಬರ್ ಅಟ್ಯಾಕ್ ಆಗಿರುವುದು ದೇಶದ ಭದ್ರತೆ ವಿಚಾರದಲ್ಲಿ ತುಂಬ ಅಪಾಯಕಾರಿ ಎಂದು ರಾಷ್ಟ್ರೀಯ ಮಾಧ್ಯಮ ಡಿಎನ್ಎ ವರದಿ ಮಾಡಿದೆ. ಮಾಹಿತಿಗಳ ಪ್ರಕಾರ, ಈ ಸೈಬರ್ ಅಟ್ಯಾಕ್ ಇ-ಮೇಲ್ ಬೆಂಗಳೂರಿನಲ್ಲಿರುವ ಅಮೆರಿಕ ಮೂಲದ ಕಂಪನಿಯಿಂದ ಬಂದಿತ್ತು ಎನ್ನಲಾಗುತ್ತಿದೆ.
ಹ್ಯಾಕರ್ಸ್ ಎನ್ಐಸಿಗೆ ಕಳಿಸಿದ್ದ ಇ-ಮೇಲ್ ನಲ್ಲಿ ವೈರಸ್ ಇತ್ತು ಎನ್ನಲಾಗಿದೆ. ಇ-ಮೇಲ್ ಕ್ಲಿಕ್ ಮಾಡುತ್ತಿದ್ದಂತೆ ಕಂಪ್ಯೂಟರ್ ಗಳಲ್ಲಿದ್ದ ಡಾಟಾಗಳು ಸೋರಿಕೆಯಾಗಿವೆ. ಕೂಡಲೇ ವೈರಸ್ ಅಟ್ಯಾಕ್ ಆಗಿರುವುದನ್ನು ತಿಳಿದ ಎನ್ಐಸಿ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೆಹಲಿಯ ಸ್ಪೆಷಲ್ ಸೆಲ್ ಪೊಲೀಸ್ ಪಡೆ ತನಿಖೆ ಆರಂಭಿಸಿದ್ದಾರೆ. ಎನ್ಐಸಿ ಸಿಬಂದಿ ನೀಡಿರುವ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಬೆಂಗಳೂರಿನಲ್ಲಿರುವ ಅಮೆರಿಕನ್ ಮೂಲದ ಕಂಪನಿಯಿಂದ ಇ-ಮೇಲ್ ಬಂದಿರುವುದನ್ನು ಪತ್ತೆ ಮಾಡಿದ್ದಾರೆ. ಕಂಪನಿಯ ಐಪಿ ವಿಳಾಸ ಪತ್ತೆ ಮಾಡುತ್ತಿದ್ದಾರೆ. ಆದರೆ, ಇ-ಮೇಲ್ ಬೆಂಗಳೂರಿನಿಂದಲೇ ಹೋಗಿತ್ತೇ ಅಥವಾ ವಿದೇಶದಿಂದ ಬಂದಿತ್ತೇ ಅನ್ನುವುದು ದೃಢಪಟ್ಟಿಲ್ಲ.
ಇತ್ತೀಚೆಗಷ್ಟೇ ಕೇಂದ್ರ ಗುಪ್ತಚರ ಪಡೆ ಅಧಿಕಾರಿಗಳು ಸೈಬರ್ ಅಟ್ಯಾಕ್ ಆಗುವ ಬಗ್ಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸರಕಾರಿ ಮತ್ತು ಖಾಸಗಿ ಕಂಪನಿಗಳು ಮುಂಜಾಗ್ರತೆ ವಹಿಸಬೇಕೆಂದು ಎಚ್ಚರಿಕೆ ನೀಡಿತ್ತು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm