ಬ್ರೇಕಿಂಗ್ ನ್ಯೂಸ್
18-09-20 05:34 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 18: ಚೀನಾ ಗೂಢಚರರು ಪ್ರಧಾನಿ ಮೋದಿ, ರಾಜನಾಥ್ ಸೇರಿದಂತೆ ದೇಶದ ವಿವಿಐಪಿಗಳ ಚಲನವಲನಗಳ ಬಗ್ಗೆ ಕಣ್ಣಿಟ್ಟಿದ್ದಾರೆ ಎಂಬ ಮಾಹಿತಿಗಳ ನಡುವೆಯೇ ಈಗ ದೇಶದ ಮಹತ್ವದ ವಿಚಾರಗಳನ್ನು ಕಾಯ್ದಿಟ್ಟುಕೊಳ್ಳುವ ನ್ಯಾಶನಲ್ ಇನ್ಫಾರ್ಮೆಟಿಕ್ ಸೆಂಟರ್ (ಎನ್ಐಸಿ) ಮೇಲೆ ಸೈಬರ್ ಅಟ್ಯಾಕ್ ಆಗಿದೆ. ಸೆಂಟರಿನ ಹಲವು ಕಂಪ್ಯೂಟರ್ ಗಳು ಹ್ಯಾಕ್ ಆಗಿದ್ದು, ಮಹತ್ವದ ವಿಚಾರಗಳನ್ನು ಕದಿಯಲಾಗಿದೆ ಎನ್ನುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ದೆಹಲಿ ಪೊಲೀಸರು ಸೈಬರ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಪ್ರಧಾನ ಮಂತ್ರಿ ಮತ್ತು ರಾಷ್ಟ್ರೀಯ ಭದ್ರತಾ ಕಾರ್ಯಾಲಯ ಸೇರಿದಂತೆ ಭದ್ರತೆಗೆ ಸಂಬಂಧಿಸಿದ ವಿಐಪಿಗಳ ಮಾಹಿತಿಗಳು ನ್ಯಾಶನಲ್ ಇನ್ಫಾರ್ಮೆಟಿಕ್ ಸೆಂಟರ್ ನಲ್ಲಿ ಇರುತ್ತವೆ. ಇಂಥ ಕೇಂದ್ರಕ್ಕೆ ಸೈಬರ್ ಅಟ್ಯಾಕ್ ಆಗಿರುವುದು ದೇಶದ ಭದ್ರತೆ ವಿಚಾರದಲ್ಲಿ ತುಂಬ ಅಪಾಯಕಾರಿ ಎಂದು ರಾಷ್ಟ್ರೀಯ ಮಾಧ್ಯಮ ಡಿಎನ್ಎ ವರದಿ ಮಾಡಿದೆ. ಮಾಹಿತಿಗಳ ಪ್ರಕಾರ, ಈ ಸೈಬರ್ ಅಟ್ಯಾಕ್ ಇ-ಮೇಲ್ ಬೆಂಗಳೂರಿನಲ್ಲಿರುವ ಅಮೆರಿಕ ಮೂಲದ ಕಂಪನಿಯಿಂದ ಬಂದಿತ್ತು ಎನ್ನಲಾಗುತ್ತಿದೆ.
ಹ್ಯಾಕರ್ಸ್ ಎನ್ಐಸಿಗೆ ಕಳಿಸಿದ್ದ ಇ-ಮೇಲ್ ನಲ್ಲಿ ವೈರಸ್ ಇತ್ತು ಎನ್ನಲಾಗಿದೆ. ಇ-ಮೇಲ್ ಕ್ಲಿಕ್ ಮಾಡುತ್ತಿದ್ದಂತೆ ಕಂಪ್ಯೂಟರ್ ಗಳಲ್ಲಿದ್ದ ಡಾಟಾಗಳು ಸೋರಿಕೆಯಾಗಿವೆ. ಕೂಡಲೇ ವೈರಸ್ ಅಟ್ಯಾಕ್ ಆಗಿರುವುದನ್ನು ತಿಳಿದ ಎನ್ಐಸಿ ಅಧಿಕಾರಿಗಳು ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೆಹಲಿಯ ಸ್ಪೆಷಲ್ ಸೆಲ್ ಪೊಲೀಸ್ ಪಡೆ ತನಿಖೆ ಆರಂಭಿಸಿದ್ದಾರೆ. ಎನ್ಐಸಿ ಸಿಬಂದಿ ನೀಡಿರುವ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ ಬೆಂಗಳೂರಿನಲ್ಲಿರುವ ಅಮೆರಿಕನ್ ಮೂಲದ ಕಂಪನಿಯಿಂದ ಇ-ಮೇಲ್ ಬಂದಿರುವುದನ್ನು ಪತ್ತೆ ಮಾಡಿದ್ದಾರೆ. ಕಂಪನಿಯ ಐಪಿ ವಿಳಾಸ ಪತ್ತೆ ಮಾಡುತ್ತಿದ್ದಾರೆ. ಆದರೆ, ಇ-ಮೇಲ್ ಬೆಂಗಳೂರಿನಿಂದಲೇ ಹೋಗಿತ್ತೇ ಅಥವಾ ವಿದೇಶದಿಂದ ಬಂದಿತ್ತೇ ಅನ್ನುವುದು ದೃಢಪಟ್ಟಿಲ್ಲ.
ಇತ್ತೀಚೆಗಷ್ಟೇ ಕೇಂದ್ರ ಗುಪ್ತಚರ ಪಡೆ ಅಧಿಕಾರಿಗಳು ಸೈಬರ್ ಅಟ್ಯಾಕ್ ಆಗುವ ಬಗ್ಗೆ ಸೂಚನೆ ನೀಡಿದ್ದರು. ಈ ಬಗ್ಗೆ ಸರಕಾರಿ ಮತ್ತು ಖಾಸಗಿ ಕಂಪನಿಗಳು ಮುಂಜಾಗ್ರತೆ ವಹಿಸಬೇಕೆಂದು ಎಚ್ಚರಿಕೆ ನೀಡಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am