ಬ್ರೇಕಿಂಗ್ ನ್ಯೂಸ್
19-09-20 12:15 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 19: ರಾಷ್ಟ್ರೀಯ ತನಿಖಾ ದಳ ಏಕಕಾಲದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ದಾಳಿ ಸಂಘಟಿಸಿದ್ದು ಒಂಬತ್ತು ಮಂದಿ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮುರ್ಶಿದ್ ಹಸನ್, ಯಾಕುಬ್ ಬಿಸ್ವಾಸ್, ಮೊಸಾರಫ್ ಹುಸೇನ್ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿತರು. ಇದೇ ವೇಳೆ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ನಜ್ಮುಸ್ ಸಾಕಿಬ್, ಅಬು ಸೂಫಿಯಾನ್, ಮೈನುಲ್ ಮೊಂಡಲ್, ಲೀ ಯೀನ್ ಅಹ್ಮದ್, ಅಲ್ ಮಮೂನ್ ಕಮಲ್, ಅತೀತುರ್ ರಹ್ಮಾನ್ ಬಂಧಿತರಾಗಿದ್ದು ಎಲ್ಲರೂ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳು.
ಅಲ್ ಖೈದಾ ಉಗ್ರರು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಉಗ್ರರು ಸಂಚು ರೂಪಿಸಿದ್ದ ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಬಳಸಲ್ಪಡುವ ಇಲೆಕ್ಟ್ರಾನಿಕ್ ಉಪಕರಣಗಳು, ಬಾಂಬ್ ತಯಾರಿಗೆ ಬಳಸುವ ಕಚ್ಚಾ ವಸ್ತುಗಳು, ಪಿಸ್ತೂಲ್, ಜಿಹಾದಿ ಸಾಹಿತ್ಯಗಳು, ಕಾಗದ ಪತ್ರಗಳು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬಂಧತರು ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಗಲಭೆ ಎಬ್ಬಿಸುವುದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅದಕ್ಕಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಫಂಡ್ ರೈಸಿಂಗ್ ಕೂಡ ಮಾಡುತ್ತಾ ಬಂದಿದ್ದರು. ಇವರ ಪೈಕಿ ಕೆಲವರು ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲು ರೆಡಿಯಾಗಿದ್ದರು. ಅದೇ ಸಂದರ್ಭದಲ್ಲಿ ಬಂಧನ ಆಗಿರುವುದರಿಂದ ದೊಡ್ಡ ಆಪತ್ತು ತಪ್ಪಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am