ಬ್ರೇಕಿಂಗ್ ನ್ಯೂಸ್
19-09-20 12:15 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 19: ರಾಷ್ಟ್ರೀಯ ತನಿಖಾ ದಳ ಏಕಕಾಲದಲ್ಲಿ ಪಶ್ಚಿಮ ಬಂಗಾಳ ಮತ್ತು ಕೇರಳದಲ್ಲಿ ದಾಳಿ ಸಂಘಟಿಸಿದ್ದು ಒಂಬತ್ತು ಮಂದಿ ಅಲ್ ಖೈದಾ ಉಗ್ರರನ್ನು ಬಂಧಿಸಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಮೂವರನ್ನು ಬಂಧಿಸಲಾಗಿದೆ. ಮುರ್ಶಿದ್ ಹಸನ್, ಯಾಕುಬ್ ಬಿಸ್ವಾಸ್, ಮೊಸಾರಫ್ ಹುಸೇನ್ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿತರು. ಇದೇ ವೇಳೆ, ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯಲ್ಲಿ ಆರು ಮಂದಿಯನ್ನು ಬಂಧಿಸಲಾಗಿದೆ. ನಜ್ಮುಸ್ ಸಾಕಿಬ್, ಅಬು ಸೂಫಿಯಾನ್, ಮೈನುಲ್ ಮೊಂಡಲ್, ಲೀ ಯೀನ್ ಅಹ್ಮದ್, ಅಲ್ ಮಮೂನ್ ಕಮಲ್, ಅತೀತುರ್ ರಹ್ಮಾನ್ ಬಂಧಿತರಾಗಿದ್ದು ಎಲ್ಲರೂ ಮುರ್ಶಿದಾಬಾದ್ ಜಿಲ್ಲೆಯ ನಿವಾಸಿಗಳು.
ಅಲ್ ಖೈದಾ ಉಗ್ರರು ದೇಶದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು. ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಉಗ್ರರು ಸಂಚು ರೂಪಿಸಿದ್ದ ಖಚಿತ ಮಾಹಿತಿ ಆಧರಿಸಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದರು. ಬಂಧಿತರಿಂದ ಅಪಾರ ಪ್ರಮಾಣದ ವಿಧ್ವಂಸಕ ಕೃತ್ಯಕ್ಕೆ ಬಳಸಲ್ಪಡುವ ಇಲೆಕ್ಟ್ರಾನಿಕ್ ಉಪಕರಣಗಳು, ಬಾಂಬ್ ತಯಾರಿಗೆ ಬಳಸುವ ಕಚ್ಚಾ ವಸ್ತುಗಳು, ಪಿಸ್ತೂಲ್, ಜಿಹಾದಿ ಸಾಹಿತ್ಯಗಳು, ಕಾಗದ ಪತ್ರಗಳು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಂಧತರು ರಾಜಧಾನಿ ದೆಹಲಿ ಸೇರಿದಂತೆ ವಿವಿಧೆಡೆ ಗಲಭೆ ಎಬ್ಬಿಸುವುದು, ವಿಧ್ವಂಸಕ ಕೃತ್ಯ ನಡೆಸಲು ಸಂಚು ನಡೆಸಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಅದಕ್ಕಾಗಿ ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ಫಂಡ್ ರೈಸಿಂಗ್ ಕೂಡ ಮಾಡುತ್ತಾ ಬಂದಿದ್ದರು. ಇವರ ಪೈಕಿ ಕೆಲವರು ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಲು ರೆಡಿಯಾಗಿದ್ದರು. ಅದೇ ಸಂದರ್ಭದಲ್ಲಿ ಬಂಧನ ಆಗಿರುವುದರಿಂದ ದೊಡ್ಡ ಆಪತ್ತು ತಪ್ಪಿದೆ ಎಂದು ಎನ್ಐಎ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm