ಬ್ರೇಕಿಂಗ್ ನ್ಯೂಸ್
24-02-22 03:57 pm HK Desk news ದೇಶ - ವಿದೇಶ
ನವದೆಹಲಿ, ಫೆ 24 : ಉಕ್ರೇನ್- ರಷ್ಯಾ ಉದ್ವಿಗ್ನತೆ ಕಾರಣದಿಂದಾಗಿ ವಿವಿಧ ರಾಷ್ಟ್ರಗಳ ಆರ್ಥಿಕತೆಯ ಮೇಲೆಯೂ ಪರಿಣಾಮ ಉಂಟಾಗಿದ್ದು, ಷೇರುಪೇಟೆಗಳು ತೀವ್ರ ಕುಸಿತ ಕಂಡಿವೆ. ಭಾರತದ ಮೇಲೆಯೂ ಕೂಡಾ ರಷ್ಯಾ-ಉಕ್ರೇನ್ ಉದ್ವಿಗ್ನತೆ ವಿಚಾರ ಪರಿಣಾಮ ಬೀರಿದೆ. ಬಿಎಸ್ಇ ಪಟ್ಟಿಯ ಕಂಪನಿಯ ಹೂಡಿಕೆದಾರರ ಸಂಪತ್ತು ಕೇವಲ ಒಂದು ಗಂಟೆ ಅವಧಿಯಲ್ಲಿ 8 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಕುಸಿದಿದೆ.
ವಿವಿಧ ಕಂಪನಿಗಳ ಮೇಲೆ ಹೂಡಿಕೆ ಮಾಡುವ ಹೂಡಿಕೆಯದಾರರೂ ರಷ್ಯಾ-ಉಕ್ರೇನ್ ಪರಿಸ್ಥಿತಿಯಿಂದಾಗಿ ಭಯಭೀತರಾಗಿದ್ದಾರೆ. ಮುಂಬೈ ಷೇರುಪೇಟೆಯ ಪಟ್ಟಿಯಲ್ಲಿರುವ ಕಂಪನಿಗಳ ಮಾರುಕಟ್ಟೆ ಬಂಡವಾಳವು ಬೆಳಗ್ಗೆ 10.15ರ ಸುಮಾರಿಗೆ 2,47,46,960.48 ಕೋಟಿ ರೂಪಾಯಿಗೆ ಕುಸಿದಿದೆ. ಮಾರುಕಟ್ಟೆ ಬಂಡವಾಳ ಎಂದರೆ ಒಂದು ಕಂಪನಿಯ ಒಟ್ಟು ಷೇರುಗಳ ಮೌಲ್ಯವಾಗಿದೆ. ಈ ಷೇರುಗಳ ಮೌಲ್ಯ 2,47,46,960.48 ಕೋಟಿ ರೂಪಾಯಿಗೆ ಕುಸಿದಿದೆ.
ಬುಧವಾರದ ಮುಂಬೈ ಷೇರು ಮಾರುಕಟ್ಟೆಯಲ್ಲಿ ವಹಿವಾಟು ಮುಕ್ತಾಯವಾದಾಗ ವಹಿವಾಟಿನ ಮುಕ್ತಾಯಕ್ಕೆ ಮಾರುಕಟ್ಟೆ ಬಂಡವಾಳವು 2,55,68,668.33 ಕೋಟಿ ರೂಪಾಯಿ ಇತ್ತು. ಈಗ 8.2 ಲಕ್ಷ ಕೋಟಿ ರೂಪಾಯಿ ಕುಸಿತವನ್ನು ಕಂಡಿದೆ.

ಉಕ್ರೇನ್ನಲ್ಲಿ ರಷ್ಯಾ ಮಿಲಿಟರಿ ಕಾರ್ಯಾಚರಣೆಯನ್ನು ಘೋಷಿಸಿದ ನಂತರ ಜಾಗತಿಕ ಷೇರು ಮಾರುಕಟ್ಟೆಗಳಲ್ಲಿಯೂ ಭಾರಿ ಏರಿಳಿತ ಸಂಭವಿಸಿತ್ತು. ಇದರೊಂದಿಗೆ ದೇಶದ ಸೆನ್ಸೆಕ್ಸ್ ಮತ್ತು ನಿಫ್ಟಿ ಗುರುವಾರ ಮುಂಜಾನೆ ಶೇಕಡಾ 3ಕ್ಕಿಂತ ಹೆಚ್ಚು ಕುಸಿತ ಕಂಡಿವೆ.
ಬಿಎಸ್ಇ ಸೆನ್ಸೆಕ್ಸ್ 1,718.99 ಪಾಯಿಂಟ್ಗಳು ಅಥವಾ ಶೇಕಡಾ 3ರಷ್ಟು ಕುಸಿದು 55,513.07 ಪಾಯಿಂಟ್ಗಳಿಗೆ ಇಳಿಕೆ ಕಂಡಿದೆ. ನಿಫ್ಟಿ 508.85 ಪಾಯಿಂಟ್ ಅಥವಾ ಶೇಕಡಾ 2.98ರಷ್ಟು ಕುಸಿದು 16,554.40 ಅಂಕಗಳಿಗೆ ತಲುಪಿದೆ.
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉಕ್ರೇನ್ನಲ್ಲಿ ಮಿಲಿಟರಿ ಕಾರ್ಯಾಚರಣೆ ಘೋಷಿಸಿದ್ದಾರೆ. ರಷ್ಯಾದ ನಾಗರಿಕರನ್ನು ಈ ಮಿಲಿಟರಿ ಕಾರ್ಯಾಚರಣೆಯನ್ನು ನಡೆಸುತ್ತಿರುವುದಾಗಿ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಾಂತವಾಗುವವರೆಗೆ ಕೆಲವು ರಾಷ್ಟ್ರಗಳ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ. ಇದರೊಂದಿಗೆ ಅಮೆರಿಕ ಮಿತ್ರ ರಾಷ್ಟ್ರಗಳು ರಷ್ಯಾದ ಮೇಲೆ ನಿರ್ಬಂಧ ಹೇರಿರುವ ಕಾರಣದಿಂದಾಗಿ ಆರ್ಥಿಕತೆಗೆ ಮತ್ತಷ್ಟು ಹೊಡೆತ ಬೀಳಲಿದೆ.
The share market tumbled three per cent on Thursday as investors dumped risky assets after Russian troops fired missiles at several Ukrainian cities which Kiev said was a full-scale invasion, sending oil prices higher and stoking inflation worries.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm