ಬ್ರೇಕಿಂಗ್ ನ್ಯೂಸ್
25-02-22 11:27 am HK Desk news ದೇಶ - ವಿದೇಶ
ನವದೆಹಲಿ, ಫೆ.24 : ರಷ್ಯಾ ಕಡೆಯಿಂದ ಬಾಂಬುಗಳ ಸುರಿಮಳೆ ಆಗುತ್ತಲೇ ಉಕ್ರೇನ್ ದೇಶದ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ತಮ್ಮ ದೇಶದ ಪ್ರಜೆಗಳಿಗೆ ಶಸ್ತ್ರ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ರಕ್ಷಿಸಲು ಬಯಸುವ ಪ್ರಜೆಗಳಿಗೆ ಸರಕಾರದ ಕಡೆಯಿಂದ ಶಸ್ತ್ರಗಳನ್ನು ನೀಡುವುದಾಗಿ ಹೇಳಿದ್ದಾರೆ.
ರಷ್ಯಾ ಆಕ್ರಮಣದ ವಿರುದ್ಧ ಸೆಣಸಲು ಬಯಸುವ ಪ್ರಜೆಗಳು ಹೊರಗೆ ಬನ್ನಿ. ರಷ್ಯಾ ವಿರುದ್ಧ ಪ್ರತಿಭಟಿಸಿ. ತಮ್ಮ ಭೂಪ್ರದೇಶವನ್ನು ಉಳಿಸುವುದಕ್ಕಾಗಿ ಶಸ್ತ್ರ ಕೈಗೆತ್ತಿಕೊಂಡು ಹೋರಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದಲ್ಲದೆ, ರಷ್ಯಾದ ದಾಳಿಯನ್ನು ಜರ್ಮನಿಯ ನಾಝಿಗಳ ದಾಳಿಗೆ ಹೋಲಿಸಿದ್ದಾರೆ. ಎರಡನೇ ಜಾಗತಿಕ ಯುದ್ಧದ ಸಂದರ್ಭದಲ್ಲಿ ನಾಝಿಗಳ ಸೈನ್ಯ ಮಾಡಿದಂತೆ ಯಾವುದೇ ಪ್ರಚೋದನೆ ಇಲ್ಲದೆ ರಷ್ಯಾ ಬೆಳ್ಳಂಬೆಳಗ್ಗೆ ದಾಳಿ ಆರಂಭಿಸಿದೆ. ರಷ್ಯಾವು ರಕ್ಕಸನ ರೀತಿ ಹಿಂಬಾಗಿಲಲ್ಲಿ ಬಂದು ಆಕ್ರಮಣ ಮಾಡಿದೆ. ಆದರೆ ನಮ್ಮ ದೇಶವು ಇದಕ್ಕೆ ಪ್ರತ್ಯುತ್ತರ ನೀಡಲಿದೆ. ಮಾಸ್ಕೋ ಎಣಿಸಿಕೊಂಡಂತೆ ಯಾವುದೂ ಆಗೋದಿಲ್ಲ. ನಮ್ಮ ಸ್ವಾತಂತ್ರ್ಯವನ್ನು ನಾವು ಬಿಟ್ಟುಕೊಡಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಕಳೆದೊಂದು ತಿಂಗಳಿಂದ ಗಡಿಯಲ್ಲಿ ಸೇನಾ ಜಮಾವಣೆಗೊಂಡು ಯುದ್ಧ ಸನ್ನದ್ಧ ಸ್ಥಿತಿಯಿದ್ದರೂ, ಗುರುವಾರ ಬೆಳಗ್ಗೆ ದಿಢೀರ್ ಆಗಿ ರಷ್ಯಾ ಅಧ್ಯಕ್ಷ ಪುತಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದರು. ಅಲ್ಲದೆ, ಆ ಕೂಡಲೇ ಉಕ್ರೇನ್ ದೇಶದ ನಾಲ್ಕು ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಲಾಗಿತ್ತು. ಯುದ್ಧ ಘೋಷಣೆ ವೇಳೆ ಹೇಳಿಕೆ ನೀಡಿದ್ದ ಪುತಿನ್, ಉಕ್ರೇನ್ ಸೇನೆ ಶಸ್ತ್ರ ಕೆಳಗಿಟ್ಟು ಮನೆಗೆ ನಡೆಯಲಿ. ಅವರನ್ನು ನಿಶಸ್ತ್ರ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದ್ದಾರೆ.
Ukrainian President Volodymyr Zelensky said the government will give weapons to all Ukrainian citizens who want to defend their country against Russian aggression.
24-02-26 08:06 pm
HK News Staffer
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
ನಾಯಕತ್ವ ಬದಲಾವಣೆ- ಸಂಪುಟ ಪುನಾರಚನೆಗೆ ಒತ್ತಾಯಿಸಿ 3...
23-02-26 05:15 pm
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
24-02-26 10:39 pm
HK News Staffer
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm