ಬ್ರೇಕಿಂಗ್ ನ್ಯೂಸ್
25-02-22 11:27 am HK Desk news ದೇಶ - ವಿದೇಶ
ನವದೆಹಲಿ, ಫೆ.24 : ರಷ್ಯಾ ಕಡೆಯಿಂದ ಬಾಂಬುಗಳ ಸುರಿಮಳೆ ಆಗುತ್ತಲೇ ಉಕ್ರೇನ್ ದೇಶದ ಅಧ್ಯಕ್ಷ ವೊಲೊದಿಮಿರ್ ಝೆಲೆನ್ಸ್ಕಿ ತಮ್ಮ ದೇಶದ ಪ್ರಜೆಗಳಿಗೆ ಶಸ್ತ್ರ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ. ರಷ್ಯಾ ಆಕ್ರಮಣದ ವಿರುದ್ಧ ದೇಶವನ್ನು ರಕ್ಷಿಸಲು ಬಯಸುವ ಪ್ರಜೆಗಳಿಗೆ ಸರಕಾರದ ಕಡೆಯಿಂದ ಶಸ್ತ್ರಗಳನ್ನು ನೀಡುವುದಾಗಿ ಹೇಳಿದ್ದಾರೆ.
ರಷ್ಯಾ ಆಕ್ರಮಣದ ವಿರುದ್ಧ ಸೆಣಸಲು ಬಯಸುವ ಪ್ರಜೆಗಳು ಹೊರಗೆ ಬನ್ನಿ. ರಷ್ಯಾ ವಿರುದ್ಧ ಪ್ರತಿಭಟಿಸಿ. ತಮ್ಮ ಭೂಪ್ರದೇಶವನ್ನು ಉಳಿಸುವುದಕ್ಕಾಗಿ ಶಸ್ತ್ರ ಕೈಗೆತ್ತಿಕೊಂಡು ಹೋರಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊದಿಮಿರ್ ಟ್ವೀಟ್ ನಲ್ಲಿ ಹೇಳಿದ್ದಾರೆ. ಇದಲ್ಲದೆ, ರಷ್ಯಾದ ದಾಳಿಯನ್ನು ಜರ್ಮನಿಯ ನಾಝಿಗಳ ದಾಳಿಗೆ ಹೋಲಿಸಿದ್ದಾರೆ. ಎರಡನೇ ಜಾಗತಿಕ ಯುದ್ಧದ ಸಂದರ್ಭದಲ್ಲಿ ನಾಝಿಗಳ ಸೈನ್ಯ ಮಾಡಿದಂತೆ ಯಾವುದೇ ಪ್ರಚೋದನೆ ಇಲ್ಲದೆ ರಷ್ಯಾ ಬೆಳ್ಳಂಬೆಳಗ್ಗೆ ದಾಳಿ ಆರಂಭಿಸಿದೆ. ರಷ್ಯಾವು ರಕ್ಕಸನ ರೀತಿ ಹಿಂಬಾಗಿಲಲ್ಲಿ ಬಂದು ಆಕ್ರಮಣ ಮಾಡಿದೆ. ಆದರೆ ನಮ್ಮ ದೇಶವು ಇದಕ್ಕೆ ಪ್ರತ್ಯುತ್ತರ ನೀಡಲಿದೆ. ಮಾಸ್ಕೋ ಎಣಿಸಿಕೊಂಡಂತೆ ಯಾವುದೂ ಆಗೋದಿಲ್ಲ. ನಮ್ಮ ಸ್ವಾತಂತ್ರ್ಯವನ್ನು ನಾವು ಬಿಟ್ಟುಕೊಡಲ್ಲ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ಕಳೆದೊಂದು ತಿಂಗಳಿಂದ ಗಡಿಯಲ್ಲಿ ಸೇನಾ ಜಮಾವಣೆಗೊಂಡು ಯುದ್ಧ ಸನ್ನದ್ಧ ಸ್ಥಿತಿಯಿದ್ದರೂ, ಗುರುವಾರ ಬೆಳಗ್ಗೆ ದಿಢೀರ್ ಆಗಿ ರಷ್ಯಾ ಅಧ್ಯಕ್ಷ ಪುತಿನ್ ಉಕ್ರೇನ್ ಮೇಲೆ ಯುದ್ಧ ಸಾರಿದ್ದರು. ಅಲ್ಲದೆ, ಆ ಕೂಡಲೇ ಉಕ್ರೇನ್ ದೇಶದ ನಾಲ್ಕು ನಗರಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ಆರಂಭಿಸಲಾಗಿತ್ತು. ಯುದ್ಧ ಘೋಷಣೆ ವೇಳೆ ಹೇಳಿಕೆ ನೀಡಿದ್ದ ಪುತಿನ್, ಉಕ್ರೇನ್ ಸೇನೆ ಶಸ್ತ್ರ ಕೆಳಗಿಟ್ಟು ಮನೆಗೆ ನಡೆಯಲಿ. ಅವರನ್ನು ನಿಶಸ್ತ್ರ ಮಾಡುವುದಷ್ಟೇ ನಮ್ಮ ಗುರಿ ಎಂದು ಹೇಳಿದ್ದಾರೆ.
Ukrainian President Volodymyr Zelensky said the government will give weapons to all Ukrainian citizens who want to defend their country against Russian aggression.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm