ಬ್ರೇಕಿಂಗ್ ನ್ಯೂಸ್
 
            
                        28-02-22 06:50 pm HK Desk news ದೇಶ - ವಿದೇಶ
 
            ನವದೆಹಲಿ, ಫೆ 28: ರಷ್ಯಾ ನಡೆಸಿದ ಬಾಂಬ್ ಹಾಗೂ ಶೆಲ್ ದಾಳಿಯಿಂದಾಗಿ ಉಕ್ರೇನ್ನಲ್ಲಿ ಕನಿಷ್ಠ 16 ಮಕ್ಕಳು ಸಾವನ್ನಪ್ಪಿದ್ದಾರೆ. ನಾಗರಿಕರ ಸಾವು-ನೋವು ಅಪಾರವಾಗಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರಿ ಡಾ. ಇಗೊರ್ ಪೊಲಿಖಾ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಸಮಯದಲ್ಲಿ ನಮ್ಮ ದೇಶದ 16 ಮಕ್ಕಳು ಸಾವನ್ನಪ್ಪಿದ್ದಾರೆ. ವಿವಿಧ ದೇಶಗಳ ನಿರ್ಬಂಧಗಳಿಂದಾಗಿ ರಷ್ಯಾದ ಆರ್ಥಿಕತೆಯು ಪ್ರತಿದಿನವೂ ದುರ್ಬಲಗೊಳ್ಳುತ್ತಿದೆ. ಇದುವರೆಗೆ ಸುಮಾರು 5,300 ರಷ್ಯಾದ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಷ್ಯಾದ ವಿಮಾನಗಳಿಗಾಗಿ ಯುರೋಪಿನ ವಾಯುಪ್ರದೇಶವನ್ನು ಭಾನುವಾರ ಮುಚ್ಚಲಾಗಿದೆ. ಆ ದೇಶದ ಆರ್ಥಿಕತೆಯು ಪ್ರತಿದಿನ ದುರ್ಬಲಗೊಳ್ಳುತ್ತಿದೆ. ರಷ್ಯಾವು ಸಂಪೂರ್ಣವಾಗಿ ಸಾವುನೋವುಗಳನ್ನು ಎದುರಿಸುತ್ತಿದೆ. ಸರಿಸುಮಾರು 5,300 ರಷ್ಯಾದ ಸೈನಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಎಲ್ಲಾ ವಿದೇಶಿ ಪಾಲುದಾರ ರಾಷ್ಟ್ರಗಳು ಯುದ್ಧ ನಿಲ್ಲಿಸಲು ವ್ಲಾಡಿಮಿರ್ ಪುಟಿನ್ ಮೇಲೆ ಒತ್ತಡ ಹೇರಬೇಕು ಎಂದು ಇದೇ ವೇಳೆ ಉಕ್ರೇನ್ ರಾಯಭಾರಿ ವಿನಂತಿಸಿದ್ದಾರೆ.

ಶಾಂತಿ ಮಾತುಕತೆಯ ಸಮಯದಲ್ಲೂ ದಾಳಿ ಆರೋಪ;
ಯುದ್ಧವನ್ನು ನಿಲ್ಲಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಒತ್ತಡ ಹೇರಲು ನಾವು ನಮ್ಮ ಎಲ್ಲಾ ಪಾಲುದಾರ ದೇಶಗಳನ್ನು ಕೇಳಿಕೊಳ್ಳುತ್ತಿದ್ದೇವೆ. ಇಂದು, ನಮ್ಮ ನಿಯೋಗವು ಮೊದಲ ಸುತ್ತಿನ ಶಾಂತಿ ಮಾತುಕತೆ ನಡೆಸಲು ಹೋಗಿದೆ. ಶಾಂತಿ ಮಾತುಕತೆಯ ಸಮಯದಲ್ಲಿಯೂ ನಿರಂತರ ಶೆಲ್ ದಾಳಿ, ಬಾಂಬ್ ದಾಳಿ ನಡೆಯುತ್ತಿವೆ ಎಂದು ಅಸಹಾಯಕತೆಯನ್ನು ತೋಡಿಕೊಂಡರು.

ಉಕ್ರೇನಿಯನ್ ನಿರಾಶ್ರಿತರ ಸಂಖ್ಯೆ 4 ಲಕ್ಷವನ್ನು ಮೀರಿದೆ. ಯುದ್ಧವನ್ನು ನಿಲ್ಲಿಸದಿದ್ದರೆ ಈ ಸಂಖ್ಯೆ 7 ಮಿಲಿಯನ್ ದಾಟಬಹುದು. ಗಡಿಯಲ್ಲಿ ಬಹಳ ಉದ್ದವಾದ ಸರತಿ ಸಾಲುಗಳಲ್ಲಿ ಉಕ್ರೇನ್ ಜನ ನಿಂತಿದ್ದು, ಗಡಿ ದಾಟಲು ಪ್ರಯತ್ನಿಸುತ್ತಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಇಗೊರ್ ಪೊಲಿಖಾ, ಭಾರತೀಯ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.
 
            
            
            At least 16 children have died in Ukraine due to Russian bombing and shelling. The death toll of civilians is immense, said Ukraine's Ambassador to India Dr. Said Igor Polikha.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm