ಬ್ರೇಕಿಂಗ್ ನ್ಯೂಸ್
 
            
                        01-03-22 11:01 pm HK Desk news ದೇಶ - ವಿದೇಶ
 
            ಕೀವ್, ಮಾ 1: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಉಕ್ರೇನ್ ರಾಜಧಾನಿ ಕೀವ್ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದೆ. ಇದರಿಂದ ಉಕ್ರೇನಿಯಿನ್ ಯಾವುದೇ ಸುದ್ದಿ ವಾಹಿನಿಗಳು ಪ್ರಸಾರವಾಗುವುದಿಲ್ಲ ಎಂದು ತಿಳಿದು ಬಂದಿದೆ.
ಈ ಹಿಂದೆ ರಷ್ಯಾವು ಕೀವ್ನ ಭದ್ರತಾ ಸೇವೆಯ ಹೆಚ್ಕ್ಯುಗೆ 'ಹೆಚ್ಚಿನ-ನಿಖರ ಶಸ್ತ್ರಾಸ್ತ್ರ'ಗಳೊಂದಿಗೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆ ಸಮೀಪದಲ್ಲಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರಿಸಲು ಸೂಚಿಸಲಾಗಿತ್ತು.
ರಷ್ಯಾ ನಾಗರಿಕರು ಮತ್ತು ಸೇನೆಯ ಮೇಲೆ ಉಕ್ರೇನ್ ಪ್ರತಿದಾಳಿ ನಡೆಸಿರುವುದರ ಬಗ್ಗೆ ಅಂಕಿ-ಸಂಖ್ಯೆಗಳನ್ನು ನೀಡುತ್ತಿದ್ದ ಹಿನ್ನೆಲೆ ಅದನ್ನು ನಿಗ್ರಹಿಸಿಲು ರಷ್ಯಾ ಮುಂದಾಗಿತ್ತು. ಅದಕ್ಕಾಗಿಯೇ ಉಕ್ರೇನಿಯನ್ ರಾಜಧಾನಿಯಲ್ಲಿನ 'ಸೆಂಟರ್ ಫಾರ್ ಇನ್ಫಾರ್ಮೇಶನ್ ಅಂಡ್ ಸೈಕಲಾಜಿಕಲ್ ಆಪರೇಷನ್ಸ್' ವಿರುದ್ಧ ದಾಳಿ ನಡೆಸಿರುವುದಾಗಿ ರಷ್ಯಾ ಎಚ್ಚರಿಕೆ ನೀಡಿತ್ತು.

ಮೊದಲೇ ಎಚ್ಚರಿಕೆ ನೀಡಿದ್ದ ರಷ್ಯಾ:
ಕೀವ್ನ ಮಧ್ಯಭಾಗದಲ್ಲಿರುವ ಪ್ರಧಾನ ಕಛೇರಿಯ ಸಮೀಪವಿರುವ ಸಂವಹನ ಗೋಪುರಗಳಿಗೆ ಸಮೀಪದಲ್ಲಿ ವಾಸಿಸುವ ನಿವಾಸಿಗಳು ತಮ್ಮ ಸುರಕ್ಷತೆಗಾಗಿ ಸ್ಥಳಾಂತರಿಸುವಂತೆ ಮಾಸ್ಕೋ ಎಚ್ಚರಿಕೆಯನ್ನು ನೀಡಿತ್ತು.
ಇದರ ಮಧ್ಯೆ, ಯುಎಸ್ ತಂತ್ರಜ್ಞಾನ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ಸೋಮವಾರ ತೆಗೆದ ಉಪಗ್ರಹ ಚಿತ್ರಗಳಲ್ಲಿ ರಷ್ಯಾದ 64-ಕಿಲೋಮೀಟರ್ (40-ಮೈಲಿ) ಉದ್ದದ ಮಿಲಿಟರಿ ಬೆಂಗಾವಲು ಪಡೆ ಉಕ್ರೇನ್ನ ರಾಜಧಾನಿ ಕೀವ್ ಕಡೆಗೆ ಹೋಗುತ್ತಿರುವುದನ್ನು ತೋರಿಸಿದೆ. ರಷ್ಯಾದ ಮಿಲಿಟರಿ ಬೆಂಗಾವಲು ಪಡೆ ಕೀವ್ನ ಉತ್ತರದಿಂದ ಮುನ್ನಡೆಯುತ್ತಿದೆ. ಈ ಹಿಂದೆ ವರದಿ ಮಾಡಿದ್ದಕ್ಕಿಂತ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿರುವುದನ್ನು ಚಿತ್ರಗಳು ಬಹಿರಂಗಪಡಿಸಿವೆ.
ಇತ್ತೀಚಿನ ನವೀಕರಣದ ಪ್ರಕಾರ, ಬೆಂಗಾವಲು ಪಡೆ ಕೀವ್ನ ಮಧ್ಯಭಾಗದಿಂದ 17 ಮೈಲಿಗಳು (25 ಕಿಲೋಮೀಟರ್) ದೂರದಲ್ಲಿದ್ದು, ಬೃಹತ್ ಬೆಂಗಾವಲು ಶಸ್ತ್ರಸಜ್ಜಿತ ವಾಹನಗಳು, ಟ್ಯಾಂಕ್ಗಳು, ಫಿರಂಗಿ ಮತ್ತು ಬೆಂಬಲ ವಾಹನಗಳನ್ನು ಒಳಗೊಂಡಿತ್ತು.
 
            
            
            The war between Ukraine and Russia marks the sixth day. In the meantime, Russia bombed a TV tower in Ukraine's capital, Kiev. It is understood that no news channels are broadcast by the Ukrainian.
 
    
            
             30-10-25 11:00 pm
                        
            
                  
                Bangalore Correspondent    
            
                    
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
 
    ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             30-10-25 11:16 pm
                        
            
                  
                Mangalore Correspondent    
            
                    
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm