ಬ್ರೇಕಿಂಗ್ ನ್ಯೂಸ್
01-03-22 11:01 pm HK Desk news ದೇಶ - ವಿದೇಶ
ಕೀವ್, ಮಾ 1: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಆರನೇ ದಿನಕ್ಕೆ ಕಾಲಿಟ್ಟಿದೆ. ಇದರ ಮಧ್ಯೆ ಉಕ್ರೇನ್ ರಾಜಧಾನಿ ಕೀವ್ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದೆ. ಇದರಿಂದ ಉಕ್ರೇನಿಯಿನ್ ಯಾವುದೇ ಸುದ್ದಿ ವಾಹಿನಿಗಳು ಪ್ರಸಾರವಾಗುವುದಿಲ್ಲ ಎಂದು ತಿಳಿದು ಬಂದಿದೆ.
ಈ ಹಿಂದೆ ರಷ್ಯಾವು ಕೀವ್ನ ಭದ್ರತಾ ಸೇವೆಯ ಹೆಚ್ಕ್ಯುಗೆ 'ಹೆಚ್ಚಿನ-ನಿಖರ ಶಸ್ತ್ರಾಸ್ತ್ರ'ಗಳೊಂದಿಗೆ ದಾಳಿ ಮಾಡುವುದಾಗಿ ಎಚ್ಚರಿಕೆ ನೀಡಿತ್ತು. ಈ ಹಿನ್ನೆಲೆ ಸಮೀಪದಲ್ಲಿ ವಾಸಿಸುವ ನಿವಾಸಿಗಳನ್ನು ಸ್ಥಳಾಂತರಿಸಲು ಸೂಚಿಸಲಾಗಿತ್ತು.
ರಷ್ಯಾ ನಾಗರಿಕರು ಮತ್ತು ಸೇನೆಯ ಮೇಲೆ ಉಕ್ರೇನ್ ಪ್ರತಿದಾಳಿ ನಡೆಸಿರುವುದರ ಬಗ್ಗೆ ಅಂಕಿ-ಸಂಖ್ಯೆಗಳನ್ನು ನೀಡುತ್ತಿದ್ದ ಹಿನ್ನೆಲೆ ಅದನ್ನು ನಿಗ್ರಹಿಸಿಲು ರಷ್ಯಾ ಮುಂದಾಗಿತ್ತು. ಅದಕ್ಕಾಗಿಯೇ ಉಕ್ರೇನಿಯನ್ ರಾಜಧಾನಿಯಲ್ಲಿನ 'ಸೆಂಟರ್ ಫಾರ್ ಇನ್ಫಾರ್ಮೇಶನ್ ಅಂಡ್ ಸೈಕಲಾಜಿಕಲ್ ಆಪರೇಷನ್ಸ್' ವಿರುದ್ಧ ದಾಳಿ ನಡೆಸಿರುವುದಾಗಿ ರಷ್ಯಾ ಎಚ್ಚರಿಕೆ ನೀಡಿತ್ತು.

ಮೊದಲೇ ಎಚ್ಚರಿಕೆ ನೀಡಿದ್ದ ರಷ್ಯಾ:
ಕೀವ್ನ ಮಧ್ಯಭಾಗದಲ್ಲಿರುವ ಪ್ರಧಾನ ಕಛೇರಿಯ ಸಮೀಪವಿರುವ ಸಂವಹನ ಗೋಪುರಗಳಿಗೆ ಸಮೀಪದಲ್ಲಿ ವಾಸಿಸುವ ನಿವಾಸಿಗಳು ತಮ್ಮ ಸುರಕ್ಷತೆಗಾಗಿ ಸ್ಥಳಾಂತರಿಸುವಂತೆ ಮಾಸ್ಕೋ ಎಚ್ಚರಿಕೆಯನ್ನು ನೀಡಿತ್ತು.
ಇದರ ಮಧ್ಯೆ, ಯುಎಸ್ ತಂತ್ರಜ್ಞಾನ ಸಂಸ್ಥೆ ಮ್ಯಾಕ್ಸರ್ ಟೆಕ್ನಾಲಜೀಸ್ ಸೋಮವಾರ ತೆಗೆದ ಉಪಗ್ರಹ ಚಿತ್ರಗಳಲ್ಲಿ ರಷ್ಯಾದ 64-ಕಿಲೋಮೀಟರ್ (40-ಮೈಲಿ) ಉದ್ದದ ಮಿಲಿಟರಿ ಬೆಂಗಾವಲು ಪಡೆ ಉಕ್ರೇನ್ನ ರಾಜಧಾನಿ ಕೀವ್ ಕಡೆಗೆ ಹೋಗುತ್ತಿರುವುದನ್ನು ತೋರಿಸಿದೆ. ರಷ್ಯಾದ ಮಿಲಿಟರಿ ಬೆಂಗಾವಲು ಪಡೆ ಕೀವ್ನ ಉತ್ತರದಿಂದ ಮುನ್ನಡೆಯುತ್ತಿದೆ. ಈ ಹಿಂದೆ ವರದಿ ಮಾಡಿದ್ದಕ್ಕಿಂತ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿರುವುದನ್ನು ಚಿತ್ರಗಳು ಬಹಿರಂಗಪಡಿಸಿವೆ.
ಇತ್ತೀಚಿನ ನವೀಕರಣದ ಪ್ರಕಾರ, ಬೆಂಗಾವಲು ಪಡೆ ಕೀವ್ನ ಮಧ್ಯಭಾಗದಿಂದ 17 ಮೈಲಿಗಳು (25 ಕಿಲೋಮೀಟರ್) ದೂರದಲ್ಲಿದ್ದು, ಬೃಹತ್ ಬೆಂಗಾವಲು ಶಸ್ತ್ರಸಜ್ಜಿತ ವಾಹನಗಳು, ಟ್ಯಾಂಕ್ಗಳು, ಫಿರಂಗಿ ಮತ್ತು ಬೆಂಬಲ ವಾಹನಗಳನ್ನು ಒಳಗೊಂಡಿತ್ತು.
The war between Ukraine and Russia marks the sixth day. In the meantime, Russia bombed a TV tower in Ukraine's capital, Kiev. It is understood that no news channels are broadcast by the Ukrainian.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm