ಬ್ರೇಕಿಂಗ್ ನ್ಯೂಸ್
05-03-22 04:04 pm HK Desk news ದೇಶ - ವಿದೇಶ
ನವದೆಹಲಿ, ಮಾ.5:ವಿಶ್ವ ರಾಷ್ಟ್ರಗಳ ಒತ್ತಡಕ್ಕೆ ಮಣಿದ ರಷ್ಯಾ ಯುಕ್ರೇನಿನ ಎರಡು ನಗರಗಳ ಮೇಲಿನ ದಾಳಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಾರಿಯೊಪೊಲ್ ಮತ್ತು ವೊಲ್ನೊವೋಕಾ ಎಂಬ ಎರಡು ನಗರಗಳಲ್ಲಿ ಕದನ ವಿರಾಮ ಘೋಷಿಸಿದ್ದು ಅಲ್ಲಿನ ನಾಗರಿಕರು ಬೇರೆಡೆ ಸ್ಥಳಾಂತರಗೊಳ್ಳಲು ಅವಕಾಶ ನೀಡಲಾಗಿದೆ.
ಇದೇ ವೇಳೆ, ಯುಕ್ರೇನ್ ಎಲ್ಲ ರೀತಿಯ ಷರತ್ತುಗಳಿಗೆ ಒಪ್ಪಿದಲ್ಲಿ ಅದರ ಜೊತೆ ಮಾತುಕತೆ ನಡೆಸುವುದಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ಎರಡು ನಗರಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ರಷ್ಯಾ ದಾಳಿ ಮುಂದುವರಿದಿದ್ದು, ಇಂದು ಬೆಳಗ್ಗೆ ಚೆರ್ನಿಹಿವ್ ನಗರದಲ್ಲಿ ಪ್ರಬಲ ಬಾಂಬ್ ದಾಳಿ ನಡೆಸಲಾಗಿದೆ. ಇರ್ಪಿನ್ ಎಂಬಲ್ಲಿ ಸೇನಾ ಆಸ್ಪತ್ರೆ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದೆ.

ಇದರ ಬೆನ್ನಲ್ಲೇ ಮಾರಿಯೊಪೊಲ್ ನಗರದಲ್ಲಿ ಜನರು ತಮ್ಮ ಊರು, ಮನೆಗಳನ್ನು ಬಿಟ್ಟು ಹಳ್ಳಿಗಳಿಗೆ ತೆರಳುತ್ತಿದ್ದಾರೆ. ಅಲ್ಲಿ ಸಿಕ್ಕಿಬಿದ್ದಿರುವ ವಿದೇಶಿ ವಿದ್ಯಾರ್ಥಿಗಳು, ಇತರ ಪ್ರಜೆಗಳು ಸುರಕ್ಷಿತವಾಗಿ ತೆರಳಲು ಅನುವು ಮಾಡಲಾಗಿದೆ. ಈವರೆಗೆ ಯುಕ್ರೇನ್ ಪೂರ್ವ ಪ್ರಾಂತ್ಯದ ನಗರಗಳ ಮೇಲೆ ನಡೆಸುತ್ತಿದ್ದ ದಾಳಿಯನ್ನು ರಷ್ಯಾ ಈಗ ಉತ್ತರಕ್ಕೂ ವ್ಯಾಪಿಸಿದ್ದು, ಅಲ್ಲಿಯೂ ಭೀತಿ ವ್ಯಕ್ತವಾಗಿದೆ. ಯುಕ್ರೇನ್ ಅಧಿಕಾರಿಗಳು ಉತ್ತರ ಪ್ರಾಂತದ ಸುಮಿ ನಗರವನ್ನು ಬಿಟ್ಟು ಜನರು ತೆರಳುವಂತೆ ಹೇಳಿದ್ದಾರೆ. ಒಂದೋ ಮನೆಯ ಒಳಗಿರಿ. ಇಲ್ಲದಿದ್ದರೆ ಮನೆ ಬಿಟ್ಟು ಹೋಗಿ ಎಂದು ಕರೆ ನೀಡಿದ್ದಾರೆ.
ಯುಕ್ರೇನ್ ಮೇಲಿನ ದಾಳಿಗೆ ಹತ್ತು ದಿನ ಪೂರೈಸಿದ್ದು, ಖೇರ್ಸನ್ ಸೇರಿದಂತೆ ಹಲವು ನಗರಗಳನ್ನು ಸಂಪೂರ್ಣವಾಗಿ ಹತೋಟಿಗೆ ತೆಗೆದುಕೊಂಡಿದೆ. ಇದೇ ವೇಳೆ, ಬಂದರು ನಗರಿ ಮಾರಿಯೊಪೊಲ್ ನಲ್ಲಿಯೂ ರಷ್ಯಾ ಮಿಲಿಟರಿ ಸುತ್ತುವರಿದಿದ್ದಾರೆ. ರಷ್ಯಾ ಎರಡು ದಿನಗಳಿಂದ ವಾಯುಪಡೆಯ ಮೂಲಕವೂ ದಾಳಿ ಆರಂಭಿಸಿದ್ದು, ಯುಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅದನ್ನು ತಡೆಯಲು ನ್ಯಾಟೋ ಪಡೆಗಳಿಗೆ ನೋ ಫ್ಲೈಯಿಂಗ್ ಝೋನ್ ಎಂದು ಘೋಷಣೆ ಮಾಡುವಂತೆ ಕೇಳಿಕೊಂಡಿದ್ದರು. ಯುಕ್ರೇನ್ ವಾಯು ಪ್ರದೇಶದಲ್ಲಿ ರಷ್ಯಾದ ವಿಮಾನಗಳು ಹಾರಾಟ ನಡೆಸದಂತೆ ತಡೆ ಹೇರಬೇಕು ಎಂದು ನ್ಯಾಟೋಗೆ ಹೇಳಿದ್ದರು. ಆದರೆ, ಯುಕ್ರೇನ್ ಕೋರಿಕೆಯನ್ನು ನ್ಯಾಟೋ ರಾಷ್ಟ್ರಗಳು ನಿರಾಕರಿಸಿವೆ. ನ್ಯಾಟೋ ಒಂದು ವೇಳೆ ಆ ರೀತಿಯ ಕ್ರಮಕ್ಕೆ ಮುಂದಾದದಲ್ಲಿ ಯುರೋಪ್ ನಲ್ಲಿ ಮತ್ತೊಂದು ಭೀಕರ ಯುದ್ಧ ಎದುರಾಗಲು ಕಾರಣವಾಗುತ್ತದೆ.
attacks on two ukrainian cities have come to a temporary halt, citizens are allowed to be cleared, and continued bombing elsewhere!
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm