ಬ್ರೇಕಿಂಗ್ ನ್ಯೂಸ್
10-03-22 01:20 pm HK Desk news ದೇಶ - ವಿದೇಶ
ಕೀವ್, ಮಾ 10: ಉಕ್ರೇನ್ನಲ್ಲಿ ರಷ್ಯಾ ದಾಳಿ ತೀವ್ರಗೊಂಡಿದೆ. ಬುಧವಾರ ರಷ್ಯಾ ಸೇನೆ ಮರಿಯುಪೋಲ್ನಲ್ಲಿರುವ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ 17ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಹೆರಿಗೆ ಆಸ್ಪತ್ರೆ ಮೇಲೆ ರಷ್ಯಾ ವೈಮಾನಿಕ ದಾಳಿ ನಡಸಿರುವ ವಿಡಿಯೋವನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿದ್ದು, ತೀವ್ರ ಖಂಡನ ವ್ಯಕ್ತಪಡಿಸಿದ್ದಾರೆ.
ಇದು ದೌರ್ಜನ್ಯ. ಈ ಜಗತ್ತು ಇನ್ನೆಷ್ಟು ದಿನ ಇಂಥ ಭಯೋತ್ಪಾದನೆಯನ್ನು ನಿರ್ಲಕ್ಷಿಸುತ್ತದೆ? ಈ ಆಕಾಶವೇ ಮುಚ್ಚಿ, ಇಂಥ ದಾಳಿಗಳು ನಿಲ್ಲಬಾರದೆ? ನಿಮಗೆ ಶಕ್ತಿ ಇರಬಹುದು ಆದರೆ ಮಾನವೀಯತೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದೀರಿ ಎಂದು ಬರೆದುಕೊಂಡಿದ್ದಾರೆ.
ಝೆಲೆನ್ಸ್ಕಿ ಶೇರ್ ಮಾಡಿಕೊಂಡಿರುವ ವಿಡಿಯೋದಲ್ಲಿ, ಆಸ್ಪತ್ರೆಯ ಒಳಗೆಲ್ಲ ಸಂಪೂರ್ಣವಾಗಿ ಧ್ವಂಸಗೊಂಡಿರುವುದು ಕಂಡು ಬಂದಿದೆ.
ಆಸ್ಪತ್ರೆಯ ಕಿಟಕಿಗಳೆಲ್ಲ ಮುರಿದು ಬಿದ್ದಿವೆ. ಗೋಡೆಗಳೂ ಒಡೆದು ಹೋಗಿದೆ. ಇದು ರಷ್ಯಾ ಸೇನೆಯ ನೇರ ದಾಳಿ ಎಂದು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ಈ ದುರ್ಘಟನೆಯಲ್ಲಿ 17 ಮಂದಿ ಗಾಯಗೊಂಡಿದ್ದು, ಯಾವುದೆ ಸಾವಿನ ವರದಿಯಾಗಿಲ್ಲ ಎಂದು ಸ್ಥಳೀಯ ಆಡಳಿತ ತಿಳಿಸಿದೆ. ಮಕ್ಕಳಿಗೆ ಯಾರಿಗೂ ಗಾಯವಾಗಿಲ್ಲ. ಆದರೆ ಈ ಆಸ್ಪತ್ರೆ ಇನ್ನು ರಿಪೇರಿ ಮಾಡಲಾಗದಷ್ಟು ಧ್ವಂಸಗೊಂಡಿದೆ ಎಂದು ಹೇಳಲಾಗುತ್ತಿದೆ.
ಮರಿಯುಪೋಲ್ ಸಿಟಿಯನ್ನು ರಷ್ಯಾ ಸೇನೆ ಮುತ್ತಿಗೆ ಹಾಕಿದೆ. ಇದು ಆಗ್ನೇಯ ಉಕ್ರೇನ್ನಲ್ಲಿರುವ ಅಜೋವ್ ಸಮುದ್ರದ ದಡದಲ್ಲಿರುವ ಒಂದು ಬಂದರು ನಗರ. ಇಲ್ಲಿ ರಷ್ಯಾ ಕದನ ವಿರಾಮ ಘೋಷಿಸಿದ್ದರೂ ಕೂಡ, ಆಗಾಗ ಅದನ್ನು ಉಲ್ಲಂಘನೆ ಮಾಡಿ ಬಾಂಬ್ ದಾಳಿ ನಡೆಸುತ್ತಲೇ ಇದೆ.
A Russian airstrike devastated a maternity hospital Wednesday in the besieged port city of Mariupol amid growing warnings from the West that Moscow’s invasion is about to take a more brutal and indiscriminate turn. Ukrainian officials said the attack wounded at least 17 people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm