ಬ್ರೇಕಿಂಗ್ ನ್ಯೂಸ್
11-03-22 03:25 pm HK Desk news ದೇಶ - ವಿದೇಶ
ನವದೆಹಲಿ, ಮಾ.11 : ಉತ್ತರ ಪ್ರದೇಶ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶ 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ. ಜನರ ನಿರ್ಣಯವನ್ನು ತೋರಿಸುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಗೆ, ಉತ್ತರ ಭಾರತದಲ್ಲಿ ರಾಜಕೀಯ ತಂತ್ರಗಾರ ಎಂದೇ ಹೆಸರಾಗಿರುವ ಪ್ರಶಾಂತ್ ಕಿಶೋರ್ ತಿರುಗೇಟು ನೀಡಿದ್ದಾರೆ.
2024ರಲ್ಲಿ ಯಾರು ಗೆಲ್ಲುತ್ತಾರೆಂದು ಆ ಸಂದರ್ಭ ಹೋರಾಟದಲ್ಲಿ ನಿರ್ಧರಿತವಾಗುತ್ತದೆ. ರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಅದನ್ನು ಹೇಳಲಾಗುವುದಿಲ್ಲ. ಸಾಹೇಬರು ಇದರ ಹಿಂದಿನ ತಂತ್ರಗಾರಿಕೆ ತಿಳ್ಕೊಂಡಿದ್ದಾರೆ. ಈ ಫಲಿತಾಂಶ ಮುಂದಿಟ್ಟುಕೊಂಡು ಎದುರಾಳಿಯನ್ನು ಮಾನಸಿಕವಾಗಿ ಹಿಮ್ಮೆಟ್ಟಿಸುವ ತಂತ್ರಕ್ಕೆ ಬಲಿಯಾಗಬಾರದು. ಸುಳ್ಳಿನ ಮಾತುಗಳಿಗೆ ಯಾರೂ ಬಲಿ ಬೀಳದಿರಿ ಎಂದು ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.
ಮಾ.10ರಂದು ಹೊರಬಿದ್ದ ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭಾಷಣ ಮಾಡಿದ್ದರು. 2019ರಲ್ಲಿ ನಾವು ಚುನಾವಣೆ ಜಯಿಸಿದಾಗ, ಅದಕ್ಕೆ 2017ರ ಉತ್ತರ ಪ್ರದೇಶದ ಗೆಲುವು ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದರು. 2022ರ ಗೆಲುವನ್ನು ಕೂಡ, 2024ರ ಚುನಾವಣೆಯ ದಿಕ್ಸೂಚಿ ಮತ್ತು ಈ ಫಲಿತಾಂಶವೇ ಲೋಕಸಭೆಯ ಚುನಾವಣೆಯನ್ನು ನಿರ್ಧರಿಸುತ್ತದೆ ಎಂದು ತಜ್ಞರು ಹೇಳುತ್ತಾರೆಂದು ಭಾವಿಸುತ್ತೇನೆ ಎಂದು ಮೋದಿ ಹೇಳಿದ್ದರು.
ಇದಕ್ಕೆ ಕೌಂಟರ್ ಆಗಿ ಟ್ವೀಟ್ ಮಾಡಿರುವ ಪ್ರಶಾಂತ್ ಕಿಶೋರ್, ರಾಜ್ಯಗಳ ಚುನಾವಣೆ ಇಟ್ಟುಕೊಂಡು ಲೋಕಸಭೆ ಫಲಿತಾಂಶವನ್ನು ನಿರೀಕ್ಷಿಸುವಂತಿಲ್ಲ ಎಂದು ಹೇಳಿದ್ದಾರೆ. ಉತ್ತರ ಪ್ರದೇಶದ 403 ಕ್ಷೇತ್ರಗಳಲ್ಲಿ 273, ಮಣಿಪುರದ 60ರಲ್ಲಿ 32, ಉತ್ತರಾಖಂಡದ 70ರಲ್ಲಿ 43, ಗೋವಾದಲ್ಲಿ 40 ಸದಸ್ಯ ಸ್ಥಾನಗಳಲ್ಲಿ 20ರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು ರಾಷ್ಟ್ರ ಮಟ್ಟದಲ್ಲಿ ಪಕ್ಷದ ಪಾಲಿಗೆ ದೊಡ್ಡ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಪಂಚ ರಾಜ್ಯಗಳಲ್ಲಿ ಪಂಜಾಬ್ ನಲ್ಲಿ ಮಾತ್ರ 117 ಸ್ಥಾನಗಳಲ್ಲಿ ಆಪ್ ಅಭ್ಯರ್ಥಿಗಳು 95 ಸ್ಥಾನಗಳನ್ನು ಗೆದ್ದು ಕ್ಲೀನ್ ಸ್ವೀಪ್ ಮಾಡಿದ್ದಾರೆ.
Prashant Kishor hit out at Prime Minister Narendra Modi for his comment on 2022's election "deciding" the outcome of the 2024 Lok Sabha polls. The political strategist said the "battle for India will be fought and decided in 2024, not in any state elections."
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 06:33 pm
HK News Desk
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
16-12-25 10:25 pm
Mangalore Correspondent
Bride Missing, Mangalore: ಬೇರೆ ಲವ್ ಇದೆಯೆಂದರೂ...
16-12-25 08:53 pm
ಕೇರಳಕ್ಕೆ ನಾಲ್ಕು ಲಕ್ಷ ಮೌಲ್ಯದ ಎಂಡಿಎಂ ಡ್ರಗ್ಸ್ ಸಾ...
16-12-25 05:24 pm
ಕೊರಗ ಸಮುದಾಯದಲ್ಲಿ ಮೊಟ್ಟಮೊದಲ ವೈದ್ಯಕೀಯ ಪದವಿ ಪಡೆದ...
16-12-25 04:26 pm
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
16-12-25 10:35 pm
Mangalore Correspondent
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am