ಬ್ರೇಕಿಂಗ್ ನ್ಯೂಸ್
 
            
                        11-03-22 10:41 pm HK Desk news ದೇಶ - ವಿದೇಶ
 
            ನವದೆಹಲಿ, ಮಾರ್ಚ್ 11: ಉಕ್ರೇನ್ ದೇಶದ ಮರಿಯೊಪೋಲ್ನಲ್ಲಿ ಇತ್ತೀಚೆಗೆ ಕದನ ವಿರಾಮ ಘೋಷಿಸಿ ನಾಗರಿಕರ ಸ್ಥಳಾಂತರಕ್ಕೆ ರಷ್ಯಾ ಅವಕಾಶ ಮಾಡಿತ್ತು. ಆದರೆ, ಅಲ್ಲೀಗ ಸಿಕ್ಕಿಬಿದ್ದಿರುವ ನಾಗರಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಪ್ರತಿ 30 ನಿಮಿಷಕ್ಕೊಮ್ಮೆ ರಷ್ಯಾವು ಆ ಭಾಗದಲ್ಲಿ ದಾಳಿ ನಡೆಸುತ್ತಿದ್ದು ಅಲ್ಲಿಂದ ಜನರನ್ನು ಸ್ಥಳಾಂತರ ಮಾಡಲು ಸಾಧ್ಯವಾಗದಂತಹ ಸ್ಥಿತಿ ಉಂಟಾಗಿದೆ.
ಮಾರಿಯೊಪೋಲ್ನಲ್ಲಿ ಸುಮಾರು 4,00000 ಜನರು ಉಳಿದುಕೊಂಡಿದ್ದಾರೆ. ಅಲ್ಲಿನ ಮೇಯರ್ ವಾಡಿಮ್ ಬಾಯ್ಚೆಂಕೊ ರಷ್ಯಾದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ರಷ್ಯಾ ಪಡೆಗಳು ನಿರ್ದಯಿಯಾಗಿ ದಾಳಿ ನಡೆಸುತ್ತಿವೆ. ಅಪಾರ್ಟ್ಮೆಂಟ್ ಕಟ್ಟಡಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದು ಜನರು ಕಂಗೆಡುವಂತಾಗಿದೆ ಎಂದು ಹೇಳಿದ್ದಾರೆ.
ಪ್ರತಿ 30 ನಿಮಿಷಗಳಿಗೊಮ್ಮೆ ರಷ್ಯಾ ವಿಮಾನಗಳು ಮಾರಿಯೊಪೋಲ್ ನಗರದ ಮೇಲೆ ಬರುತ್ತಿದ್ದು ವಸತಿ ಪ್ರದೇಶಗಳನ್ನು ಗುರಿಯಾಗಿಸಿ ಬಾಂಬ್ ದಾಳಿ ನಡೆಸುತ್ತಿದೆ, ನಾಗರಿಕರನ್ನು ಕೊಲ್ಲುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ಎಲ್ಲರನ್ನೂ ಕೊಲ್ಲುತ್ತಿದೆ ಎಂದು ಮಾರಿಯುಪೋಲ್ನ ಮೇಯರ್ ವಾಡಿಮ್ ಬಾಯ್ಚೆಂಕೊ ಟ್ವೀಟ್ ಪೋಸ್ಟ್ನಲ್ಲಿ ಹೇಳಿದ್ದಾರೆ.

ರಷ್ಯಾ ಶೆಲ್ ದಾಳಿಯಿಂದಾಗಿ ಗುರುವಾರ ಒಬ್ಬ ನಾಗರಿಕನಿಗೂ ಅಲ್ಲಿಂದ ಹೊರಬರಲು ಸಾಧ್ಯವಾಗಲಿಲ್ಲ. ಮೇಯರ್ಗೆ ಸಲಹೆಗಾರರಾದ ಪೆಟ್ರೋ ಆಂಡ್ರುಶೆಂಕೊ ಈ ಬಗ್ಗೆ ಮಾಹಿತಿ ನೀಡಿದ್ದು, 'ರಷ್ಯನ್ನರು ನಮ್ಮ ಜನರನ್ನು ಸಂಪೂರ್ಣವಾಗಿ ನಾಶ ಮಾಡಲು ಬಯಸಿದ್ದಾರೆ. ಜನರ ಸ್ಥಳಾಂತರ ಪ್ರಕ್ರಿಯೆ ನಡೆಯದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಉಕ್ರೇನ್ನಲ್ಲಿ ಬಂದರು ನಗರಿ ಮಾರಿಯುಪೋಲ್ ಪ್ರಮುಖ ಪ್ರದೇಶ. ಇದನ್ನು ವಶಕ್ಕೆ ಪಡೆದರೆ ರಷ್ಯಾಕ್ಕೆ ಪೂರ್ವದಲ್ಲಿ ಮಾಸ್ಕೋ ಪರ ಇರುವ ಪ್ರದೇಶಗಳನ್ನು ಮತ್ತು ದಕ್ಷಿಣಕ್ಕೆ ರಷ್ಯಾಕ್ಕೆ ಸೇರಿಸಿದ ಕ್ರೆಮಿಯಾವನ್ನು ಸಂಪರ್ಕಿಸಲು ಸಾಧ್ಯವಾಗುತ್ತದೆ. ಉಕ್ರೇನ್ ಅಧಿಕಾರಿಗಳ ಪ್ರಕಾರ ರಷ್ಯಾದ ದಾಳಿಯಿಂದ ಈವರೆಗೆ 1,300 ಸಾವು ಆಗಿದೆ. ವಿಶ್ವಸಂಸ್ಥೆಯು ಗುರುವಾರ ಉಕ್ರೇನ್ನಾದ್ಯಂತ 41 ಮಕ್ಕಳು ಸೇರಿದಂತೆ 549 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಿದೆ. ಸಾವಿನ ನೈಜ ಗಣಿತ ಇನ್ನೂ ಹೆಚ್ಚಿನದಿರುತ್ತದೆ.
 
            
            
            Civilians trapped in Ukraine’s Mariupol have gone through “two days of hell”, a local official said on Friday, claiming Russian attacks “every 30 minutes” have scuppered any attempt at evacuations from the besieged port city.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm