ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm