ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm