ಬ್ರೇಕಿಂಗ್ ನ್ಯೂಸ್
12-03-22 10:42 am HK Desk news ದೇಶ - ವಿದೇಶ
ಕಾಸರಗೋಡು, ಮಾ.12 : ಕೇರಳ ರಾಜ್ಯದ ಅಲ್ಪಸಂಖ್ಯಾತ ಭಾಷಾವಾರು ಪ್ರದೇಶವಾದ ಕಾಸರಗೋಡು ಜಿಲ್ಲೆಯ ಕನ್ನಡಿಗರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ 2022-23ನೇ ಸಾಲಿನ ಬಜೆಟ್ ಘೋಷಣೆಯಾದ ಸಾಂಸ್ಕೃತಿಕ ಭವನ ಕಟ್ಟಡ ನಿರ್ಮಾಣಕ್ಕೆ ಕಾಸರಗೋಡಿನಲ್ಲಿ ಉಚಿತವಾಗಿ ಸರ್ಕಾರಿ ನಿವೇಶನ ನೀಡುವಂತೆ ಕಾಸರಗೋಡಿನ ಜಿಲ್ಲಾಧಿಕಾರಿಗೆ ಗಡಿ ಅಭಿವೃದ್ಧಿ ಪ್ರಾಧಿಕಾರದಿಂದ ಮನವಿ ಸಲ್ಲಿಸಲಾಗಿದೆ.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆದಿದ್ದು ಜಿಲ್ಲಾಧಿಕಾರಿ ಶ್ರೀಮತಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರನ್ನು ಭೇಟಿಯಾದ ಕರ್ನಾಟಕ ಗಡಿ ಅಭಿವೃಧ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಹಾಗೂ ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ ಈ ಕುರಿತು ಮನವಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿಗಳು, ಎಡನೀರು ಮಠದಲ್ಲಿ ಕಾಸರಗೋಡಿನ ಪ್ರಮುಖ ಸಂಘ-ಸಂಸ್ಥೆಗಳ ಹಾಗೂ ಕನ್ನಡ ಶಾಲಾ ಕಾಲೇಜುಗಳ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ್ದು ಕಾಸರಗೋಡಿನ ಗಡಿ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಕಯ್ಯಾರ ಕಿಞ್ಞಣ್ಣ ರೈ ಹೆಸರಿನಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣವನ್ನು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಇದೇ ವರ್ಷ ಕೈಗೆತ್ತಿಕೊಳ್ಳಲಾಗುವುದು ಎಂದು ಡಾ. ಸಿ.ಸೋಮಶೇಖರ್ ತಿಳಿಸಿದರು. ಎಡನೀರು ಮಠದ ಸಚ್ಚಿದಾನಂದ ಭಾರತಿ ಸ್ವಾಮೀಜಿ ಉಪಸ್ಥಿತರಿದ್ದರು.
ಕಾಸರಗೋಡಿನ ಕನ್ನಡಿಗರ ಸಾಂಸ್ಕೃತಿಕ ಸ್ಥಿತಿಗತಿಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಸರಗೋಡಿನಲ್ಲಿ ಸಾಂಸ್ಕೃತಿಕ ಭವನ ಸ್ಥಾಪನೆಗೆ ಆಸಕ್ತಿ ತೋರಿದ್ದರು.
Kasaragod Samskrutika Bhavana to be named after Kayyar Kinhanna Rai, memorandum submitted.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm