ಬ್ರೇಕಿಂಗ್ ನ್ಯೂಸ್
12-03-22 12:12 pm HK Desk news ದೇಶ - ವಿದೇಶ
ನವದೆಹಲಿ, ಮಾ 12: ರಾಷ್ಟ್ರ ರಾಜಧಾನಿಯ ಗೋಕುಲಪುರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪಿಎಸ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ಈಶಾನ್ಯ ದೆಹಲಿ ಹೆಚ್ಚುವರಿ ಡಿಸಿಪಿ ಮಾತನಾಡಿ, ಘಟನೆ ನಡೆದಾಕ್ಷಣ ನಾವು ಕಾರ್ಯಪ್ರವೃತ್ತರಾಗಿದ್ದು, ಸ್ಥಳಕ್ಕೆ ತಲುಪಿದ್ದೆವು. ಜೊತೆಗೆ ಅಗ್ನಿ ಶಾಮಕದಳದವರನ್ನು ಸಂಪರ್ಕಿಸಿದ್ದೇವೆ. ಅವರು ಕೂಡ ಉತ್ತಮಾಗಿ ಸ್ಪಂದನೆ ನೀಡಿದ್ದಾರೆ. ಬೆಂಕಿಯನ್ನು ಸುಮಾರು 4 ಗಂಟೆ ವೇಳೆಗೆ ನಂದಿಸಿದ್ದೇವೆ. ಆದರೆ ಅಷ್ಟರಲ್ಲಾಗಲೇ 30 ಗುಡಿಸಲು ಸುಟ್ಟುಹೋಗಿದ್ದು, 7 ಜನರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಕಲೆಹಾಕಿದ ಬಳಿಕ ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
As many as seven people lost their lives in a massive fire that broke out in the shanties of Delhi’s Gokulpuri area on Saturday. At least 60 huts were gutted in the fire.The fire fighting department received a call at around 1 am on Saturday and were told about the incident. Around 13 fire tenders reached the spot and doused the flames within a few hours.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm