ಬ್ರೇಕಿಂಗ್ ನ್ಯೂಸ್
12-03-22 12:12 pm HK Desk news ದೇಶ - ವಿದೇಶ
ನವದೆಹಲಿ, ಮಾ 12: ರಾಷ್ಟ್ರ ರಾಜಧಾನಿಯ ಗೋಕುಲಪುರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ 60 ಗುಡಿಸಲು ಭಸ್ಮವಾಗಿದ್ದು, 7 ಜನ ಸಾವನ್ನಪ್ಪಿದ ಘಟನೆ ನಡೆದಿದೆ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಗೋಕುಲಪುರಿ ಪಿಎಸ್ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ದೆಹಲಿ ಅಗ್ನಿಶಾಮಕ ಸೇವೆಯ ಮಾಹಿತಿಯ ಪ್ರಕಾರ, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಅಗ್ನಿಶಾಮಕ ಇಲಾಖೆಯಿಂದ ದುರಂತದಲ್ಲಿ ಸಾವನ್ನಪ್ಪಿದ್ದ 7 ಶವಗಳನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದೆ.
ಈ ಬಗ್ಗೆ ಈಶಾನ್ಯ ದೆಹಲಿ ಹೆಚ್ಚುವರಿ ಡಿಸಿಪಿ ಮಾತನಾಡಿ, ಘಟನೆ ನಡೆದಾಕ್ಷಣ ನಾವು ಕಾರ್ಯಪ್ರವೃತ್ತರಾಗಿದ್ದು, ಸ್ಥಳಕ್ಕೆ ತಲುಪಿದ್ದೆವು. ಜೊತೆಗೆ ಅಗ್ನಿ ಶಾಮಕದಳದವರನ್ನು ಸಂಪರ್ಕಿಸಿದ್ದೇವೆ. ಅವರು ಕೂಡ ಉತ್ತಮಾಗಿ ಸ್ಪಂದನೆ ನೀಡಿದ್ದಾರೆ. ಬೆಂಕಿಯನ್ನು ಸುಮಾರು 4 ಗಂಟೆ ವೇಳೆಗೆ ನಂದಿಸಿದ್ದೇವೆ. ಆದರೆ ಅಷ್ಟರಲ್ಲಾಗಲೇ 30 ಗುಡಿಸಲು ಸುಟ್ಟುಹೋಗಿದ್ದು, 7 ಜನರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಕಲೆಹಾಕಿದ ಬಳಿಕ ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ಧಾವಿಸಿವೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
As many as seven people lost their lives in a massive fire that broke out in the shanties of Delhi’s Gokulpuri area on Saturday. At least 60 huts were gutted in the fire.The fire fighting department received a call at around 1 am on Saturday and were told about the incident. Around 13 fire tenders reached the spot and doused the flames within a few hours.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm