ಬ್ರೇಕಿಂಗ್ ನ್ಯೂಸ್
22-03-22 06:57 pm HK Desk news ದೇಶ - ವಿದೇಶ
ನವದೆಹಲಿ, ಮಾ.22: 1990ರಲ್ಲಿ ಕಾಶ್ಮೀರಿ ಪಂಡಿತರ ಭೀಕರ ಹತ್ಯಾಕಾಂಡ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಲೇ ಅದಕ್ಕೆ ಕಾರಣವಾಗಿದ್ದಾರೆ ಎಂಬ ಗಂಭೀರ ಆರೋಪ ಹೊತ್ತಿರುವ ಆಗಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ನರಮೇಧಕ್ಕೆ ನಾನು ಕಾರಣ ಆಗಿದ್ದಲ್ಲಿ ನನ್ನನ್ನು ಗಲ್ಲಿಗೇರಿಸಲಿ. ದೇಶದ ಯಾವುದೇ ಭಾಗದಲ್ಲಿ ಗಲ್ಲಿಗೇರಲು ತಯಾರಿದ್ದೇನೆ ಎಂದು ಹೇಳಿದ್ದಾರೆ.
ಇಂಡಿಯಾ ಟುಡೇ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಫಾರೂಕ್ ಅಬ್ದುಲ್ಲಾ, ಘಟನೆ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ಅಥವಾ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಿದರೆ ಸತ್ಯ ಹೊರಬಂದೀತು. ಯಾರು ಕೃತ್ಯಕ್ಕೆ ಕಾರಣ ಅನ್ನೋದು ಹೊರಬರುತ್ತದೆ. ಒಂದು ವೇಳೆ ಫಾರೂಕ್ ಅಬ್ದುಲ್ಲಾ ಕಾರಣ ಎಂದಾಗಿದ್ದಲ್ಲಿ ದೇಶದ ಯಾವುದೇ ಮೂಲೆಯಲ್ಲಿ ಗಲ್ಲು ಗಂಬಕ್ಕೇರಲು ತಯಾರಿದ್ದೇನೆ. ತನಿಖೆ ಎದುರಿಸುವುದಕ್ಕೂ ಸಿದ್ಧನಿದ್ದೇನೆ. ಆದರೆ, ಸುಮ್ಮನೆ ನನ್ನ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ನಾನು ಈ ಆರೋಪ ಹೊತ್ತುಕೊಳ್ಳಲು ಸಿದ್ಧನಿಲ್ಲ. ಜನರಿಗೆ ಸತ್ಯ ತಿಳಿಯಬೇಕು ಎಂದಿದ್ದರೆ, ಆಗ ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥರಾಗಿದ್ದವರನ್ನು ಪ್ರಶ್ನೆ ಮಾಡಿ. ಅಥವಾ ಆಗ ಕೇಂದ್ರ ಸಚಿವರಾಗಿದ್ದ, ಈಗ ಕೇರಳ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇಳಿ. ಒಂದಷ್ಟು ಸತ್ಯ ಹೊರ ಬರಬಹುದು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಕಾಶ್ಮೀರ್ ಫೈಲ್ಸ್ ಅನ್ನುವ ಸಿನಿಮಾ ಪೂರ್ತಿಯಾಗಿ ಪೂರ್ವಾಗ್ರಹ ಪೀಡಿತವಾಗಿ ಕೂಡಿದೆ. ಆಗ ನಡೆದಿರುವ ದುರಂತ ಮಾತ್ರ ರಾಜ್ಯದ ಪ್ರತೀ ಜನರನ್ನೂ ತಟ್ಟಿತ್ತು. ಹಿಂದು, ಮುಸ್ಲಿಂ ಎಲ್ಲರನ್ನೂ ಘಾಸಿಗೊಳಿಸಿತ್ತು. ನನ್ನ ಹೃದಯವೂ ಕಲಕಿದ್ದು, ಅದರಿಂದಾದ ಘಾಸಿಯಿಂದ ಹೊರಬಂದಿಲ್ಲ. ಅದರಲ್ಲಿ ಕೆಲವು ರಾಜಕೀಯ ಪಕ್ಷಗಳ ಪಾತ್ರವೂ ಇತ್ತು ಎಂದು ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
With the Kashmiri Pandit exodus back at the centre of political discourse following the release of the film 'The Kashmir Files', former Jammu and Kashmir chief minister Farooq Abdullah said he is ready to be hanged anywhere in the country if he is found responsible for the events of 1990.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm