ಬ್ರೇಕಿಂಗ್ ನ್ಯೂಸ್
22-03-22 06:57 pm HK Desk news ದೇಶ - ವಿದೇಶ
ನವದೆಹಲಿ, ಮಾ.22: 1990ರಲ್ಲಿ ಕಾಶ್ಮೀರಿ ಪಂಡಿತರ ಭೀಕರ ಹತ್ಯಾಕಾಂಡ ಬಿಂಬಿಸುವ ಕಾಶ್ಮೀರ್ ಫೈಲ್ಸ್ ಸಿನಿಮಾ ದೇಶಾದ್ಯಂತ ಸದ್ದು ಮಾಡುತ್ತಲೇ ಅದಕ್ಕೆ ಕಾರಣವಾಗಿದ್ದಾರೆ ಎಂಬ ಗಂಭೀರ ಆರೋಪ ಹೊತ್ತಿರುವ ಆಗಿನ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ನರಮೇಧಕ್ಕೆ ನಾನು ಕಾರಣ ಆಗಿದ್ದಲ್ಲಿ ನನ್ನನ್ನು ಗಲ್ಲಿಗೇರಿಸಲಿ. ದೇಶದ ಯಾವುದೇ ಭಾಗದಲ್ಲಿ ಗಲ್ಲಿಗೇರಲು ತಯಾರಿದ್ದೇನೆ ಎಂದು ಹೇಳಿದ್ದಾರೆ.
ಇಂಡಿಯಾ ಟುಡೇ ವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಈ ಬಗ್ಗೆ ಹೇಳಿಕೆ ನೀಡಿರುವ ಫಾರೂಕ್ ಅಬ್ದುಲ್ಲಾ, ಘಟನೆ ಬಗ್ಗೆ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ಅಥವಾ ನ್ಯಾಯಾಧೀಶರೊಬ್ಬರನ್ನು ನೇಮಕ ಮಾಡಿದರೆ ಸತ್ಯ ಹೊರಬಂದೀತು. ಯಾರು ಕೃತ್ಯಕ್ಕೆ ಕಾರಣ ಅನ್ನೋದು ಹೊರಬರುತ್ತದೆ. ಒಂದು ವೇಳೆ ಫಾರೂಕ್ ಅಬ್ದುಲ್ಲಾ ಕಾರಣ ಎಂದಾಗಿದ್ದಲ್ಲಿ ದೇಶದ ಯಾವುದೇ ಮೂಲೆಯಲ್ಲಿ ಗಲ್ಲು ಗಂಬಕ್ಕೇರಲು ತಯಾರಿದ್ದೇನೆ. ತನಿಖೆ ಎದುರಿಸುವುದಕ್ಕೂ ಸಿದ್ಧನಿದ್ದೇನೆ. ಆದರೆ, ಸುಮ್ಮನೆ ನನ್ನ ಮೇಲೆ ಆರೋಪ ಹೊರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ನಾನು ಈ ಆರೋಪ ಹೊತ್ತುಕೊಳ್ಳಲು ಸಿದ್ಧನಿಲ್ಲ. ಜನರಿಗೆ ಸತ್ಯ ತಿಳಿಯಬೇಕು ಎಂದಿದ್ದರೆ, ಆಗ ಇಂಟೆಲಿಜೆನ್ಸ್ ಬ್ಯೂರೋ ಮುಖ್ಯಸ್ಥರಾಗಿದ್ದವರನ್ನು ಪ್ರಶ್ನೆ ಮಾಡಿ. ಅಥವಾ ಆಗ ಕೇಂದ್ರ ಸಚಿವರಾಗಿದ್ದ, ಈಗ ಕೇರಳ ರಾಜ್ಯಪಾಲರಾಗಿರುವ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಕೇಳಿ. ಒಂದಷ್ಟು ಸತ್ಯ ಹೊರ ಬರಬಹುದು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಕಾಶ್ಮೀರ್ ಫೈಲ್ಸ್ ಅನ್ನುವ ಸಿನಿಮಾ ಪೂರ್ತಿಯಾಗಿ ಪೂರ್ವಾಗ್ರಹ ಪೀಡಿತವಾಗಿ ಕೂಡಿದೆ. ಆಗ ನಡೆದಿರುವ ದುರಂತ ಮಾತ್ರ ರಾಜ್ಯದ ಪ್ರತೀ ಜನರನ್ನೂ ತಟ್ಟಿತ್ತು. ಹಿಂದು, ಮುಸ್ಲಿಂ ಎಲ್ಲರನ್ನೂ ಘಾಸಿಗೊಳಿಸಿತ್ತು. ನನ್ನ ಹೃದಯವೂ ಕಲಕಿದ್ದು, ಅದರಿಂದಾದ ಘಾಸಿಯಿಂದ ಹೊರಬಂದಿಲ್ಲ. ಅದರಲ್ಲಿ ಕೆಲವು ರಾಜಕೀಯ ಪಕ್ಷಗಳ ಪಾತ್ರವೂ ಇತ್ತು ಎಂದು ಅಬ್ದುಲ್ಲಾ ಪ್ರತಿಕ್ರಿಯಿಸಿದ್ದಾರೆ.
With the Kashmiri Pandit exodus back at the centre of political discourse following the release of the film 'The Kashmir Files', former Jammu and Kashmir chief minister Farooq Abdullah said he is ready to be hanged anywhere in the country if he is found responsible for the events of 1990.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm