ಬ್ರೇಕಿಂಗ್ ನ್ಯೂಸ್
 
            
                        23-03-22 05:32 pm HK Desk news ದೇಶ - ವಿದೇಶ
 
            ನವದೆಹಲಿ, ಮಾ.23: ದೆಹಲಿ ಪಾಲಿಕೆ ಚುನಾವಣೆಯನ್ನು ಸಕಾಲದಲ್ಲಿ ನಡೆಸಿ, ಬಿಜೆಪಿ ಗೆದ್ದರೆ ಆಮ್ ಆದ್ಮಿ ಪಕ್ಷವು ರಾಜಕೀಯವನ್ನೇ ತ್ಯಜಿಸಲಿದೆ. ಜಗತ್ತಿನ ಅತಿದೊಡ್ಡ ಪಕ್ಷ ಎನ್ನುತ್ತಿರುವ ಬಿಜೆಪಿಗೆ ಸವಾಲು ಹಾಕುತ್ತೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೊಸ ಸವಾಲು ಹಾಕಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಬಿಜೆಪಿ ಸರಕಾರವು ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರಿಗೆ ಅವಮಾನ ಮಾಡಿದೆ. ತಾವು ಸೋಲುತ್ತೇವೆಂಬ ಭಯದಲ್ಲಿ ಬಿಜೆಪಿ ದೆಹಲಿ ಪಾಲಿಕೆಯ ಚುನಾವಣೆಯನ್ನು ಮುಂದೂಡುತ್ತೆ ಅಂದಾದಲ್ಲಿ ಮುಂದೆ, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಸೋಲುವ ಭಯದಲ್ಲಿ ಮುಂದೂಡಬಹುದು ಎಂದು ಹೇಳಿದ್ದಾರೆ.
ದೆಹಲಿ ಪಾಲಿಕೆಯ ಚುನಾವಣೆಯನ್ನು ಏಕೀಕರಣದ ನೆಪದಲ್ಲಿ ಬಿಜೆಪಿ ಮುಂದೂಡುತ್ತಿದೆ ಎಂದು ಹೇಳಿದ ಕೇಜ್ರಿವಾಲ್, ಗುಜರಾತಿನಲ್ಲಿ ಚುನಾವಣೆ ಸೋಲುತ್ತೇವೆಂದು ಭಯದಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರವನ್ನು ಒಂದಾಗಿಸುತ್ತೇವೆಂದು ಹೇಳಿ ಅಲ್ಲಿಯ ಚುನಾವಣೆಯನ್ನೂ ಇದೇ ರೀತಿ ಮುಂದೂಡುತ್ತೀರಾ.. ಲೋಕಸಭೆ ಚುನಾವಣೆಯನ್ನೂ ಇದೇ ರೀತಿ ಮುಂದೂಡಿಕೆ ಮಾಡುತ್ತೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ದೆಹಲಿಯಲ್ಲಿ ಉತ್ತರ, ದಕ್ಷಿಣ, ಪೂರ್ವ ಹೀಗೆ ಮೂರು ಪ್ರತ್ಯೇಕ ಮಹಾನಗರ ಪಾಲಿಕೆಗಳಿದ್ದು ಅವನ್ನು ಒಂದಾಗಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರಕ್ಕೆ ಬಂದಿದ್ದು, ಅದಕ್ಕಾಗಿ ಪ್ರತ್ಯೇಕ ಮಸೂದೆಯನ್ನು ತರಲು ಮುಂದಾಗಿದೆ. ಇದಕ್ಕಾಗಿ ಸದ್ಯಕ್ಕೆ ಚುನಾವಣೆ ನಡೆಸದಿರಲು ದೆಹಲಿ ಚುನಾವಣೆ ಆಯೋಗಕ್ಕೆ ಕೇಂದ್ರ ತಿಳಿಸಿದೆ. ಇದರಿಂದಾಗಿ ಮಹಾನಗರ ಪಾಲಿಕೆಯ ಚುನಾವಣೆ ಮುಂದೂಡಿಕೆ ಆಗಿದ್ದು ಆಮ್ ಆದ್ಮಿ ಪಕ್ಷವು ಬಿಜೆಪಿ ನಡೆಗೆ ಕಿಡಿಕಾರಿದೆ.
 
            
            
            Delhi Chief Minister Arvind Kejriwal on Wednesday said the Aam Aadmi Party (AAP) will quit politics if the Bharatiya Janata Party (BJP) gets the civic polls conducted on time and wins them.“I dare BJP to conduct elections on time and win. If BJP wins the civic elections, we will leave politics,” Kejriwal told reporters at Delhi Vidhan Sabha.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm