ಬ್ರೇಕಿಂಗ್ ನ್ಯೂಸ್
 
            
                        24-03-22 02:00 pm HK Desk news ದೇಶ - ವಿದೇಶ
 
            ಜೈಪುರ, ಮಾ.24 : ನಾವು ನೆಹರು -ಗಾಂಧಿ ಕುಟುಂಬದ ಗುಲಾಮರು. ಕೊನೆಯ ಉಸಿರು ಇರುವವರೆಗೂ ಗುಲಾಮರಾಗಿಯೇ ಇರುತ್ತೇವೆ. ಹೀಗೆ ಹೇಳಿಕೊಳ್ಳಲು ನಾಚಿಕೆ ಪಡುವುದಿಲ್ಲ ಎಂದು ರಾಜಸ್ಥಾನದ ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದಾರೆ. ಹರಿದೇವ್ ಜೋಶಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಲೋಧಾ, ಬಿಜೆಪಿಯವರು ನಮ್ಮ ಬಗ್ಗೆ ಗಾಂಧಿ ಕುಟುಂಬದ ಗುಲಾಮರು ಎಂದು ದೂರುತ್ತಾರೆ. ಹೌದು.. ನಾವು ನೆಹರು - ಗಾಂಧಿ ಕುಟುಂಬದ ಗುಲಾಮರು. ನಾವು ಅವರ ಇಶಾರೆಯಡಿಯಲ್ಲೇ ಇರಬೇಕಾಗುತ್ತದೆ. ನಾವು ಯಾವಾಗಲೂ ಹಾಗೆಯೇ ಇರಲು ಬಯಸುತ್ತೇವೆ ಎಂದಿದ್ದಾರೆ.
ನಾವು ಗಾಂಧಿ ಕುಟುಂಬದ ಕೊಡುಗೆಯನ್ನು ನಿರಾಕರಿಸುವಂತಿಲ್ಲ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧಿ ಕುಟುಂಬ ಇರದೇ ಇರುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಹಾಗಾಗಿ ನಾವು ಅವರಿಗೆ ಋಣಿಯಾಗಿರಲೇಬೇಕು ಎಂದು ಲೋಧಾ ಹೇಳಿದ್ದಾರೆ. ಇವರ ಮಾತು ಕೇಳಿ ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಛೇಡಿಸಿದ್ದಾರೆ. ಅಸೆಂಬ್ಲಿಯಲ್ಲಿ ಎದ್ದು ನಿಂತು ಮಾತನಾಡಿದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ನನ್ನ ಮಿತ್ರರಾದ ಓ ಗುಲಾಮರೇ! ಗುಲಾಮಗಿರಿ ಒಪ್ಪಿಕೊಂಡಿರುವುದಕ್ಕೆ ನಿಮಗೆ ಅಭಿನಂದನೆಗಳು. ನಿಮ್ಮ ಮಾತಿನ ಪ್ರಕಾರ ರಾಜಸ್ಥಾನದ ಎಲ್ಲ ಕಾಂಗ್ರೆಸ್ ಶಾಸಕರು ಕೂಡ ಗುಲಾಮರು ತಾನೇ ಎಂದು ವ್ಯಂಗ್ಯವಾಗಿ ಕೇಳಿದರು
 
ಗುಲಾಮರು ಎಂದ ಮೇಲೆ ಇವರು ಸಮಾಜಕ್ಕೆ ಯಾವ ಸಂದೇಶ ಕೊಡುತ್ತಾರೆ. ಗುಲಾಮರು ತಮ್ಮ ಮನಸ್ಸಿನಿಂದ ಮಾತನಾಡಲು ಸಾಧ್ಯವಿಲ್ಲ. ಲೋಧಾ ಈ ಪರಿಯ ಗುಲಾಮಿತನಕ್ಕಾಗಿ ಎರಡು ಬಾರಿ ಕಾಂಗ್ರೆಸ್ನಲ್ಲಿಯೇ ಟಿಕೆಟ್ ನಿರಾಕರಣೆಗೆ ಒಳಗಾಗಿದ್ದಾರೆ. ನಿಮ್ಮ ಗುಲಾಮಿತನಕ್ಕೆ ಸಿಕ್ಕ ಭಿಕ್ಷೆಯೇ ಅದು ಎಂದು ರಾಥೋಡ್ ಲೇವಡಿ ಮಾಡಿದ್ದಾರೆ.
 
            
            
            Rajasthan Minister and Congress MLA Pratap Khachariyawas on Wednesday slammed Sirohi MLA Sanyam Lodha over his “slaves of the Nehru-Gandhi family” remark saying that the family which itself fought for the country’s freedom, will never ask anyone to do its slavery.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 10:47 pm
                        
            
                  
                Mangalore Correspondent    
            
                    
 
    MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
 
    ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
 
    78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    
            
             31-10-25 10:57 pm
                        
            
                  
                Mangalore Correspondent    
            
                    
 
    ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm