ಬ್ರೇಕಿಂಗ್ ನ್ಯೂಸ್
24-03-22 02:00 pm HK Desk news ದೇಶ - ವಿದೇಶ
ಜೈಪುರ, ಮಾ.24 : ನಾವು ನೆಹರು -ಗಾಂಧಿ ಕುಟುಂಬದ ಗುಲಾಮರು. ಕೊನೆಯ ಉಸಿರು ಇರುವವರೆಗೂ ಗುಲಾಮರಾಗಿಯೇ ಇರುತ್ತೇವೆ. ಹೀಗೆ ಹೇಳಿಕೊಳ್ಳಲು ನಾಚಿಕೆ ಪಡುವುದಿಲ್ಲ ಎಂದು ರಾಜಸ್ಥಾನದ ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದಾರೆ. ಹರಿದೇವ್ ಜೋಶಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಲೋಧಾ, ಬಿಜೆಪಿಯವರು ನಮ್ಮ ಬಗ್ಗೆ ಗಾಂಧಿ ಕುಟುಂಬದ ಗುಲಾಮರು ಎಂದು ದೂರುತ್ತಾರೆ. ಹೌದು.. ನಾವು ನೆಹರು - ಗಾಂಧಿ ಕುಟುಂಬದ ಗುಲಾಮರು. ನಾವು ಅವರ ಇಶಾರೆಯಡಿಯಲ್ಲೇ ಇರಬೇಕಾಗುತ್ತದೆ. ನಾವು ಯಾವಾಗಲೂ ಹಾಗೆಯೇ ಇರಲು ಬಯಸುತ್ತೇವೆ ಎಂದಿದ್ದಾರೆ.
ನಾವು ಗಾಂಧಿ ಕುಟುಂಬದ ಕೊಡುಗೆಯನ್ನು ನಿರಾಕರಿಸುವಂತಿಲ್ಲ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧಿ ಕುಟುಂಬ ಇರದೇ ಇರುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಹಾಗಾಗಿ ನಾವು ಅವರಿಗೆ ಋಣಿಯಾಗಿರಲೇಬೇಕು ಎಂದು ಲೋಧಾ ಹೇಳಿದ್ದಾರೆ. ಇವರ ಮಾತು ಕೇಳಿ ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಛೇಡಿಸಿದ್ದಾರೆ. ಅಸೆಂಬ್ಲಿಯಲ್ಲಿ ಎದ್ದು ನಿಂತು ಮಾತನಾಡಿದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ನನ್ನ ಮಿತ್ರರಾದ ಓ ಗುಲಾಮರೇ! ಗುಲಾಮಗಿರಿ ಒಪ್ಪಿಕೊಂಡಿರುವುದಕ್ಕೆ ನಿಮಗೆ ಅಭಿನಂದನೆಗಳು. ನಿಮ್ಮ ಮಾತಿನ ಪ್ರಕಾರ ರಾಜಸ್ಥಾನದ ಎಲ್ಲ ಕಾಂಗ್ರೆಸ್ ಶಾಸಕರು ಕೂಡ ಗುಲಾಮರು ತಾನೇ ಎಂದು ವ್ಯಂಗ್ಯವಾಗಿ ಕೇಳಿದರು
ಗುಲಾಮರು ಎಂದ ಮೇಲೆ ಇವರು ಸಮಾಜಕ್ಕೆ ಯಾವ ಸಂದೇಶ ಕೊಡುತ್ತಾರೆ. ಗುಲಾಮರು ತಮ್ಮ ಮನಸ್ಸಿನಿಂದ ಮಾತನಾಡಲು ಸಾಧ್ಯವಿಲ್ಲ. ಲೋಧಾ ಈ ಪರಿಯ ಗುಲಾಮಿತನಕ್ಕಾಗಿ ಎರಡು ಬಾರಿ ಕಾಂಗ್ರೆಸ್ನಲ್ಲಿಯೇ ಟಿಕೆಟ್ ನಿರಾಕರಣೆಗೆ ಒಳಗಾಗಿದ್ದಾರೆ. ನಿಮ್ಮ ಗುಲಾಮಿತನಕ್ಕೆ ಸಿಕ್ಕ ಭಿಕ್ಷೆಯೇ ಅದು ಎಂದು ರಾಥೋಡ್ ಲೇವಡಿ ಮಾಡಿದ್ದಾರೆ.
Rajasthan Minister and Congress MLA Pratap Khachariyawas on Wednesday slammed Sirohi MLA Sanyam Lodha over his “slaves of the Nehru-Gandhi family” remark saying that the family which itself fought for the country’s freedom, will never ask anyone to do its slavery.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm