ಬ್ರೇಕಿಂಗ್ ನ್ಯೂಸ್
24-03-22 02:00 pm HK Desk news ದೇಶ - ವಿದೇಶ
ಜೈಪುರ, ಮಾ.24 : ನಾವು ನೆಹರು -ಗಾಂಧಿ ಕುಟುಂಬದ ಗುಲಾಮರು. ಕೊನೆಯ ಉಸಿರು ಇರುವವರೆಗೂ ಗುಲಾಮರಾಗಿಯೇ ಇರುತ್ತೇವೆ. ಹೀಗೆ ಹೇಳಿಕೊಳ್ಳಲು ನಾಚಿಕೆ ಪಡುವುದಿಲ್ಲ ಎಂದು ರಾಜಸ್ಥಾನದ ಸಿರೋಹಿ ಶಾಸಕ ಸನ್ಯಾಮ್ ಲೋಧಾ ಅವರು ಅಲ್ಲಿನ ವಿಧಾನಸಭೆಯಲ್ಲಿ ಹೇಳಿದ್ದಾರೆ.
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶಾಸಕ ಲೋಧಾ, ರಾಜಸ್ಥಾನ ವಿಧಾನಸಭೆಯಲ್ಲಿ ಬಜೆಟ್ ಅಧಿವೇಶನದ ವೇಳೆ ಮಾತನಾಡಿದ್ದಾರೆ. ಹರಿದೇವ್ ಜೋಶಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ತಿದ್ದುಪಡಿ ಮಸೂದೆ ಕುರಿತು ಮಾತನಾಡಿದ ಲೋಧಾ, ಬಿಜೆಪಿಯವರು ನಮ್ಮ ಬಗ್ಗೆ ಗಾಂಧಿ ಕುಟುಂಬದ ಗುಲಾಮರು ಎಂದು ದೂರುತ್ತಾರೆ. ಹೌದು.. ನಾವು ನೆಹರು - ಗಾಂಧಿ ಕುಟುಂಬದ ಗುಲಾಮರು. ನಾವು ಅವರ ಇಶಾರೆಯಡಿಯಲ್ಲೇ ಇರಬೇಕಾಗುತ್ತದೆ. ನಾವು ಯಾವಾಗಲೂ ಹಾಗೆಯೇ ಇರಲು ಬಯಸುತ್ತೇವೆ ಎಂದಿದ್ದಾರೆ.
ನಾವು ಗಾಂಧಿ ಕುಟುಂಬದ ಕೊಡುಗೆಯನ್ನು ನಿರಾಕರಿಸುವಂತಿಲ್ಲ. ಸ್ವಾತಂತ್ರ್ಯ ಕಾಲದಲ್ಲಿ ಗಾಂಧಿ ಕುಟುಂಬ ಇರದೇ ಇರುತ್ತಿದ್ದರೆ ದೇಶಕ್ಕೆ ಸ್ವಾತಂತ್ರ್ಯ ಸಿಗುತ್ತಿರಲಿಲ್ಲ. ಹಾಗಾಗಿ ನಾವು ಅವರಿಗೆ ಋಣಿಯಾಗಿರಲೇಬೇಕು ಎಂದು ಲೋಧಾ ಹೇಳಿದ್ದಾರೆ. ಇವರ ಮಾತು ಕೇಳಿ ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಶಾಸಕರನ್ನು ಛೇಡಿಸಿದ್ದಾರೆ. ಅಸೆಂಬ್ಲಿಯಲ್ಲಿ ಎದ್ದು ನಿಂತು ಮಾತನಾಡಿದ ಪ್ರತಿಪಕ್ಷದ ನಾಯಕ ರಾಜೇಂದ್ರ ರಾಥೋಡ್, ನನ್ನ ಮಿತ್ರರಾದ ಓ ಗುಲಾಮರೇ! ಗುಲಾಮಗಿರಿ ಒಪ್ಪಿಕೊಂಡಿರುವುದಕ್ಕೆ ನಿಮಗೆ ಅಭಿನಂದನೆಗಳು. ನಿಮ್ಮ ಮಾತಿನ ಪ್ರಕಾರ ರಾಜಸ್ಥಾನದ ಎಲ್ಲ ಕಾಂಗ್ರೆಸ್ ಶಾಸಕರು ಕೂಡ ಗುಲಾಮರು ತಾನೇ ಎಂದು ವ್ಯಂಗ್ಯವಾಗಿ ಕೇಳಿದರು
ಗುಲಾಮರು ಎಂದ ಮೇಲೆ ಇವರು ಸಮಾಜಕ್ಕೆ ಯಾವ ಸಂದೇಶ ಕೊಡುತ್ತಾರೆ. ಗುಲಾಮರು ತಮ್ಮ ಮನಸ್ಸಿನಿಂದ ಮಾತನಾಡಲು ಸಾಧ್ಯವಿಲ್ಲ. ಲೋಧಾ ಈ ಪರಿಯ ಗುಲಾಮಿತನಕ್ಕಾಗಿ ಎರಡು ಬಾರಿ ಕಾಂಗ್ರೆಸ್ನಲ್ಲಿಯೇ ಟಿಕೆಟ್ ನಿರಾಕರಣೆಗೆ ಒಳಗಾಗಿದ್ದಾರೆ. ನಿಮ್ಮ ಗುಲಾಮಿತನಕ್ಕೆ ಸಿಕ್ಕ ಭಿಕ್ಷೆಯೇ ಅದು ಎಂದು ರಾಥೋಡ್ ಲೇವಡಿ ಮಾಡಿದ್ದಾರೆ.
Rajasthan Minister and Congress MLA Pratap Khachariyawas on Wednesday slammed Sirohi MLA Sanyam Lodha over his “slaves of the Nehru-Gandhi family” remark saying that the family which itself fought for the country’s freedom, will never ask anyone to do its slavery.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm