ಬ್ರೇಕಿಂಗ್ ನ್ಯೂಸ್
22-09-20 05:56 pm Headline Karnataka News Network ದೇಶ - ವಿದೇಶ
ಕೊಚ್ಚಿ, ಸೆಪ್ಟಂಬರ್ 22: ‘ತಾಯಿಯ ಅಂಗಾಂಗಗಳು ಮಾರಾಟಕ್ಕಿವೆ. ಮಕ್ಕಳ ಚಿಕಿತ್ಸೆಗಾಗಿ ತನ್ನೆಲ್ಲ ಅಂಗಗಳನ್ನೂ ಮಾರಾಟ ಮಾಡುತ್ತೇನೆ’ ಹೀಗೆ ಬಡ ತಾಯಿಯೊಬ್ಬಳು ತನ್ನ ಮಕ್ಕಳ ಚಿಕಿತ್ಸೆಗಾಗಿ ಬೋರ್ಡ್ ಹಿಡಿದು ನಿಂತ ಹೃದಯ ಕಲಕುವ ಘಟನೆ ಕೇರಳದ ಕೊಚ್ಚಿಯಲ್ಲಿ ಬೆಳಕಿಗೆ ಬಂದಿದೆ.
ಶಾಂತಿ ಎಂಬ ಮಧ್ಯವಯಸ್ಕ ಮಹಿಳೆಯೊಬ್ಬರು ತನ್ನ ಬೆಳೆದು ನಿಂತ ಮಕ್ಕಳ ಜೊತೆ ರಸ್ತೆ ಬದಿಯಲ್ಲಿ ಭಿತ್ತಿಪತ್ರ ಹಿಡಿದು ನಿಂತಿದ್ದರು. ಮಲಪ್ಪುರಂ ಜಿಲ್ಲೆಯ ನಿವಾಸಿಯಾಗಿರುವ ಈ ಮಹಿಳೆ ತನ್ನ ಐವರು ಮಕ್ಕಳೊಂದಿಗೆ ಕೊಚ್ಚಿಯಲ್ಲಿ ನೆಲೆಸಿದ್ದಾರೆ. ಮಕ್ಕಳಿಗೆ ಹುಷಾರಿಲ್ಲ. ಅವರ ಚಿಕಿತ್ಸೆಗಾಗಿ ತನ್ನೆಲ್ಲ ಅಂಗಗಳನ್ನು ಮಾರಲು ನಿರ್ಧರಿಸಿದ್ದಾಗಿ ಎಂದು ಬರೆದಿದ್ದಾರೆ.
ತಂದೆಯಿಲ್ಲದ ಈ ಕುಟುಂಬದ ಹೊಣೆ ಹೊತ್ತಿದ್ದ ಹಿರಿಯ ಮಗ 25 ವರ್ಷದ ರಾಜೇಶ್, ಇತ್ತೀಚೆಗೆ ಅಪಘಾತಕ್ಕೀಡಾಗಿದ್ದು ಮೆದುಳಿನ ಸರ್ಜರಿಗೆ ಒಳಗಾಗಿದ್ದಾನೆ. ಇನ್ನು 2ನೇ ಮಗ ರಂಜಿತ್ ಹೊಟ್ಟೆಯಲ್ಲಿ ಟ್ಯೂಮರ್ ಆಗಿದ್ದು, ಶಸ್ತ್ರಚಿಕಿತ್ಸೆ ಮಾಡಿಕೊಂಡಿದ್ದಾನೆ. ಇನ್ನು ಮೂರನೇ ಮಗ 21 ವರ್ಷದ ಸಜಿತ್, ಥಿಯೇಟರಲ್ಲಿ ಕೆಲಸ ಮಾಡುತ್ತಿದ್ದು ಕೊರೊನಾದಿಂದಾಗಿ ಕೆಲಸ ಕಳಕೊಂಡಿದ್ದಾನೆ. ಇನ್ನು 11 ವರ್ಷದ ಮಗಳಿದ್ದು ರಸ್ತೆ ಅಪಘಾತದಿಂದಾಗಿ ನರದ ಸರ್ಜರಿಗೆ ಒಳಗಾಗಬೇಕೆಂದು ವೈದ್ಯರು ತಿಳಿಸಿದ್ದಾರೆ. ಇನ್ನೊಂದು ಸಣ್ಣ ಮಗುವಿದ್ದು, ಶಾಲೆಗೆ ಹೋಗುತ್ತಿದೆ. ಹೀಗಾಗಿ ಬದುಕು ಸಾಗಿಸಲು ಸಾಧ್ಯವಾಗದೆ ಈ ಕೆಲಸಕ್ಕೆ ಮುಂದಾಗಿದ್ದಾಗಿ ಶಾಂತಿ ಹೇಳುತ್ತಾರೆ.

ಮಹಿಳೆ ಭಿತ್ತಿಪತ್ರ ಹಿಡಿದು ರಸ್ತೆಯಲ್ಲಿ ನಿಲ್ಲುತ್ತಿದ್ದಂತೆ ಎಚ್ಚತ್ತುಕೊಂಡಿರುವ ಅಲ್ಲಿನ ಜಿಲ್ಲಾಡಳಿತ ಮಹಿಳೆಗೆ ಸಹಾಯ ಮಾಡಲು ಮುಂದೆ ಬಂದಿದೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಶಾಂತಿ, ನಾವು ಹಲವು ದಿನಗಳಿಂದ ಇಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇವೆ. ಮೋಟರ್ ಡ್ರೈವಿಂಗ್ ಕಲಿಸಲು ಹೋಗುತ್ತಿದೆ. ಕೊರೊನಾದಿಂದಾಗಿ ಕೆಲಸವನ್ನೂ ಕಳಕೊಂಡಿದ್ದೇನೆ. ಸದ್ಯ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗದ ಸ್ಥಿತಿ ಇದೆ. ನನ್ನ ಮೂವರು ಮಕ್ಕಳಿಗೆ ಆರೋಗ್ಯ ತೊಂದರೆಗಳಿದ್ದು, ಕೆಲಸ ಮಾಡಲು ಆಗುತ್ತಿಲ್ಲ. ಈಗಾಗಲೇ 20 ಲಕ್ಷ ರೂ. ನಷ್ಟು ಸಾಲ ಮಾಡಿದ್ದೇನೆ. ನಮಗೆ ಹಣದ ಮೂಲ ಯಾವುದೂ ಇಲ್ಲ. ಹೀಗಾಗಿ ಜೀವನ ಕಷ್ಟವಾಗಿದೆ ಎಂದು ಕಣ್ಣೀರು ಹಾಕಿದ್ದಾರೆ.ತನ್ನ ಕಿರಿಯ ಮಗುವನ್ನು ಗರ್ಭಿಣಿಯಾಗಿದ್ದ ಸಂದರ್ಭದಲ್ಲಿ ಪತಿ ಬಿಟ್ಟು ಹೋಗಿದ್ದಾರೆ.
ಮಹಿಳೆ ಬೀದಿಗೆ ಬಂದಿರುವ ವಿಚಾರ ಮಾಧ್ಯಮಗಳಲ್ಲಿ ಬರುತ್ತಿದ್ದಂತೆ ಜಿಲ್ಲಾಡಳಿತ ಕುಟುಂಬವನ್ನು ಆಶ್ರಯ ಮನೆಯೊಂದಕ್ಕೆ ಸ್ಥಳಾಂತರಿಸಿದೆ. ಅಲ್ಲದೆ ಮಕ್ಕಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ರಾಜ್ಯ ಸರ್ಕಾರದ ಆರೋಗ್ಯ ಸಚಿವೆ ಕೆ.ಕೆ.ಶೈಲಜಾ ತಿಳಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am