ಬ್ರೇಕಿಂಗ್ ನ್ಯೂಸ್
26-03-22 08:27 pm HK Desk news ದೇಶ - ವಿದೇಶ
ಕಣ್ಣೂರು (ಕೇರಳ), ಮಾ.26: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ತಳಿಪರಂಬ ಶ್ರೀ ರಾಜರಾಜೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದಿದ್ದಾರೆ.
ಖಾಸಗಿ ಕಾರ್ಯಕ್ರಮದ ನಿಮಿತ್ತ ಕಣ್ಣೂರಿಗೆ ಭೇಟಿ ನೀಡಿದ್ದ ಕುಮಾರಸ್ವಾಮಿ, ಬೆಳಗ್ಗೆಯೇ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿ ಕೆಲ ಹೊತ್ತು ದೈವ ಸನ್ನಿಧಾನದಲ್ಲಿ ಸಮಯ ಕಳೆದರು. ಪ್ರಶಾಂತ ವಾತಾವರಣದಲ್ಲಿ ಇರುವ ಈ ಆಲಯ, ದೇಶದ 108 ಪ್ರಾಚೀನ ಶಿವಾಲಯಗಳಲ್ಲಿ ಒಂದು. ತ್ರೇತಾಯುಗದಲ್ಲಿ ಸಾಕ್ಷಾತ್ ಶ್ರೀರಾಮನೇ ಇಲ್ಲಿನ ಶಿವನ ರೂಪವಾದ ರಾಜರಾಜೇಶ್ವರ ದೇವರಿಗೆ ಪೂಜೆ ಸಲ್ಲಿಸಿದ್ದ ಎಂಬ ಐತಿಹ್ಯವಿದೆ. ಇಂಥ ಪುಣ್ಯಸ್ಥಳದಲ್ಲಿ ಶಿವನ ದರುಶನ ಪಡೆದಿದ್ದು ನನ್ನ ಭಾಗ್ಯವೇ ಸರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ್ ಜತೆಯಲ್ಲಿ ಇದ್ದರು. ದೇವಳದ ಆಡಳಿತ ಮಂಡಳಿಯ ಮುಖ್ಯಸ್ಥರು, ಅಧಿಕಾರಿಗಳು ಕುಮಾರಸ್ವಾಮಿ ಅವರನ್ನು ಬರಮಾಡಿಕೊಂಡು ದೇವಳದ ಬಗ್ಗೆ ಮಾಹಿತಿ ನೀಡಿದರು.


ದೇವರ ದರುಶನದ ನಂತರ ಮಾಜಿ ಮುಖ್ಯಮಂತ್ರಿಗಳು ದೇವಳಕ್ಕೆ ಸುತ್ತು ಪ್ರದಕ್ಷಿಣೆ ಹಾಕಿದರು. ದೇವಾಲಯದ ನಿರ್ಮಾಣ ಶೈಲಿ, ಧಾರ್ಮಿಕ ವಿಧಿ ವಿಧಾನಗಳು ಇತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ಕೂಡ ಚುನಾವಣೆಗೆ ಮುನ್ನ ಕಣ್ಣೂರು ಜಿಲ್ಲೆಯ ತಳಿಪರಂಬ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಆನಂತರ ಪ್ರತಿ ಚುನಾವಣೆಯ ಸಂದರ್ಭದಲ್ಲಿ ತಳಿಪರಂಬ ಭೇಟಿ ನೀಡುವುದನ್ನು ರೂಢಿ ಮಾಡಿಕೊಂಡಿದ್ದಾರೆ.
HD Kumaraswamy visits Kerala Rajarajeshwari Temple along with Bandeppa Manikappa Kashempur.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm