ಬ್ರೇಕಿಂಗ್ ನ್ಯೂಸ್
26-03-22 09:19 pm HK Desk news ದೇಶ - ವಿದೇಶ
ಚಂಡೀಗಢ, ಮಾ.26: ಇತ್ತೀಚೆಗೆ ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಭಗವಂತ್ ಮಾನ್ ಮತ್ತೊಂದು ಕ್ರಾಂತಿಕಾರಕ ನಡೆ ಮುಂದಿಟ್ಟಿದ್ದು ಜನರ ಗಮನ ಸೆಳೆಯುವ ಕಾರ್ಯ ಮಾಡಿದ್ದಾರೆ.
ಪಂಜಾಬ್ ನಲ್ಲಿ ಇನ್ಮುಂದೆ ಮಾಜಿ ಶಾಸಕರು ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಎಂದು ಭಗವಂತ್ ಮಾನ್ ಕೂ ಅಂತರ್ಜಾಲ ತಾಣದಲ್ಲಿ ಟ್ವೀಟ್ ಮಾಡಿದ್ದಾರೆ. ಮಾಜಿ ಶಾಸಕರಾದವರು ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಬೇಕು ಅನ್ನುವುದು ನಮ್ಮ ಸರಕಾರದ ನಿರ್ಧಾರ. ಕೆಲವು ಶಾಸಕರು ಮೂರು ಬಾರಿ, ಐದು ಬಾರಿ, ಹತ್ತು ಸಲ ಗೆದ್ದವರೂ ಇದ್ದಾರೆ. ಅವರೆಲ್ಲ ಪ್ರತಿ ಅವಧಿಯ ಲೆಕ್ಕದಲ್ಲಿ ಪ್ರತ್ಯೇಕ ಪಿಂಚಣಿ ಪಡೆಯುತ್ತಿದ್ದಾರೆ. ಟಿಕೆಟ್ ಸಿಗದೆ ಸೋತು, ಮನೆಯಲ್ಲಿ ಕುಳಿತವರೂ ಹೀಗೆ ಲಕ್ಷಾಂತರ ರೂ. ಪಿಂಚಣಿ ಪಡೆಯುತ್ತಿರುವವರಲ್ಲಿ ಇದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗುತ್ತಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.
ಇನ್ಮುಂದೆ ಒಬ್ಬರು ಎಷ್ಟು ಬಾರಿ ಶಾಸಕರಾದರೂ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ. ಹೆಚ್ಚೆಂದರೆ ಪ್ರತಿ ತಿಂಗಳಿಗೆ 75 ಸಾವಿರ ರೂ. ಪಿಂಚಣಿ ಪಡೆಯಲಿದ್ದಾರೆ. ಹಳೆಯ ಪದ್ಧತಿಯನ್ನು ರದ್ದುಪಡಿಸಲಿದ್ದು ಇದರಿಂದ ಪಂಜಾಬ್ ಸರಕಾರಕ್ಕೆ ರೂ. 80 ಕೋಟಿ ಉಳಿತಾಯ ಆಗಲಿದೆ ಎನ್ನಲಾಗುತ್ತಿದೆ. ಚುನಾವಣೆಯಲ್ಲಿ ಸೋತರೂ ಎರಡು - ಮೂರು ಬಾರಿ ಶಾಸಕರಾದ ನೆಲೆಯಲ್ಲಿ ಲಕ್ಷಾಂತರ ರೂ. ಪಿಂಚಣಿ ಪಡೆಯುವ ಮಂದಿ ಇದ್ದಾರೆ. ಒಂದು ಅವಧಿಗೆ 75 ಸಾವಿರ ಅಲ್ಲದೆ, ಪ್ರತೀ ಅವಧಿಗೆ 66 ಶೇ. ಹೆಚ್ಚುವರಿ ಸೇರಿಸಿ ಕೊಡಲಾಗುತ್ತದೆ. ಇದರ ಪ್ರಕಾರ ಮೂರ್ನಾಲ್ಕು ಲಕ್ಷ ರೂ. ತಿಂಗಳಿಗೆ ಪಿಂಚಣಿ ಪಡೆಯುವ ಪದ್ಧತಿ ಜಾರಿಯಲ್ಲಿದ್ದು ಅದನ್ನು ರದ್ದುಪಡಿಸಲು ಮಾನ್ ಮುಂದಾಗಿದ್ದಾರೆ.
ಇದೇ ಪದ್ಧತಿ ದೇಶದ ಬಹುತೇಕ ರಾಜ್ಯಗಳಲ್ಲಿ ಜಾರಿಯಲ್ಲಿದ್ದು, ಈ ಪದ್ಧತಿಯನ್ನು ಹರಿಯಾಣ ಸರಕಾರ ಕಳೆದ ವರ್ಷ ತೆಗೆದುಹಾಕಿತ್ತು. ಅಲ್ಲಿನ ಕೆಲವು ಶಾಸಕರು ಸ್ವಯಂಪ್ರೇರಣೆಯಿಂದ ಪಿಂಚಣಿ ಬೇಡ ಎಂದಿದ್ದರು. ಪಂಜಾಬಲ್ಲಿ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಶಿರೋಮಣಿ ಅಕಾಲಿದಳ ಸ್ವಾಗತಿಸಿದೆ. ಭಗವಂತ್ ಮಾನ್ ಸರಕಾರ ಇತ್ತೀಚೆಗೆ ಭಗತ್ ಸಿಂಗ್ ಬಲಿದಾನ ದಿನದಂದು ಸರಕಾರಿ ರಜೆ ಘೋಷಣೆ ಮಾಡಿದ್ದಲ್ಲದೆ, ಭ್ರಷ್ಟಾಚಾರ ತಡೆಗೆ ಸಹಾಯವಾಣಿ ಆರಂಭಿಸಿದ್ದರು. ಆಮೂಲಕ ಭ್ರಷ್ಟಾಚಾರ ತಡೆಗೆ ಆಪ್ ಸರಕಾರ ಮೊದಲ ಹೆಜ್ಜೆ ಇಟ್ಟಿತ್ತು.
Punjab chief minister Bhagwant Mann has announced that former MLAs in the state would now get a pension for one term only and that family allowances of MLAs would also be reduced so that the money saved can be spent on the welfare of the people.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm