ಬ್ರೇಕಿಂಗ್ ನ್ಯೂಸ್
26-03-22 09:19 pm HK Desk news ದೇಶ - ವಿದೇಶ
ಚಂಡೀಗಢ, ಮಾ.26: ಇತ್ತೀಚೆಗೆ ಪಂಜಾಬ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಭಗವಂತ್ ಮಾನ್ ಮತ್ತೊಂದು ಕ್ರಾಂತಿಕಾರಕ ನಡೆ ಮುಂದಿಟ್ಟಿದ್ದು ಜನರ ಗಮನ ಸೆಳೆಯುವ ಕಾರ್ಯ ಮಾಡಿದ್ದಾರೆ.
ಪಂಜಾಬ್ ನಲ್ಲಿ ಇನ್ಮುಂದೆ ಮಾಜಿ ಶಾಸಕರು ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ ಎಂದು ಭಗವಂತ್ ಮಾನ್ ಕೂ ಅಂತರ್ಜಾಲ ತಾಣದಲ್ಲಿ ಟ್ವೀಟ್ ಮಾಡಿದ್ದಾರೆ. ಮಾಜಿ ಶಾಸಕರಾದವರು ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಬೇಕು ಅನ್ನುವುದು ನಮ್ಮ ಸರಕಾರದ ನಿರ್ಧಾರ. ಕೆಲವು ಶಾಸಕರು ಮೂರು ಬಾರಿ, ಐದು ಬಾರಿ, ಹತ್ತು ಸಲ ಗೆದ್ದವರೂ ಇದ್ದಾರೆ. ಅವರೆಲ್ಲ ಪ್ರತಿ ಅವಧಿಯ ಲೆಕ್ಕದಲ್ಲಿ ಪ್ರತ್ಯೇಕ ಪಿಂಚಣಿ ಪಡೆಯುತ್ತಿದ್ದಾರೆ. ಟಿಕೆಟ್ ಸಿಗದೆ ಸೋತು, ಮನೆಯಲ್ಲಿ ಕುಳಿತವರೂ ಹೀಗೆ ಲಕ್ಷಾಂತರ ರೂ. ಪಿಂಚಣಿ ಪಡೆಯುತ್ತಿರುವವರಲ್ಲಿ ಇದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ಹೊರೆಯಾಗುತ್ತಿದೆ ಎಂದು ಭಗವಂತ್ ಮಾನ್ ಹೇಳಿದ್ದಾರೆ.

ಇನ್ಮುಂದೆ ಒಬ್ಬರು ಎಷ್ಟು ಬಾರಿ ಶಾಸಕರಾದರೂ ಒಂದು ಅವಧಿಗೆ ಮಾತ್ರ ಪಿಂಚಣಿ ಪಡೆಯಲಿದ್ದಾರೆ. ಹೆಚ್ಚೆಂದರೆ ಪ್ರತಿ ತಿಂಗಳಿಗೆ 75 ಸಾವಿರ ರೂ. ಪಿಂಚಣಿ ಪಡೆಯಲಿದ್ದಾರೆ. ಹಳೆಯ ಪದ್ಧತಿಯನ್ನು ರದ್ದುಪಡಿಸಲಿದ್ದು ಇದರಿಂದ ಪಂಜಾಬ್ ಸರಕಾರಕ್ಕೆ ರೂ. 80 ಕೋಟಿ ಉಳಿತಾಯ ಆಗಲಿದೆ ಎನ್ನಲಾಗುತ್ತಿದೆ. ಚುನಾವಣೆಯಲ್ಲಿ ಸೋತರೂ ಎರಡು - ಮೂರು ಬಾರಿ ಶಾಸಕರಾದ ನೆಲೆಯಲ್ಲಿ ಲಕ್ಷಾಂತರ ರೂ. ಪಿಂಚಣಿ ಪಡೆಯುವ ಮಂದಿ ಇದ್ದಾರೆ. ಒಂದು ಅವಧಿಗೆ 75 ಸಾವಿರ ಅಲ್ಲದೆ, ಪ್ರತೀ ಅವಧಿಗೆ 66 ಶೇ. ಹೆಚ್ಚುವರಿ ಸೇರಿಸಿ ಕೊಡಲಾಗುತ್ತದೆ. ಇದರ ಪ್ರಕಾರ ಮೂರ್ನಾಲ್ಕು ಲಕ್ಷ ರೂ. ತಿಂಗಳಿಗೆ ಪಿಂಚಣಿ ಪಡೆಯುವ ಪದ್ಧತಿ ಜಾರಿಯಲ್ಲಿದ್ದು ಅದನ್ನು ರದ್ದುಪಡಿಸಲು ಮಾನ್ ಮುಂದಾಗಿದ್ದಾರೆ.
ಇದೇ ಪದ್ಧತಿ ದೇಶದ ಬಹುತೇಕ ರಾಜ್ಯಗಳಲ್ಲಿ ಜಾರಿಯಲ್ಲಿದ್ದು, ಈ ಪದ್ಧತಿಯನ್ನು ಹರಿಯಾಣ ಸರಕಾರ ಕಳೆದ ವರ್ಷ ತೆಗೆದುಹಾಕಿತ್ತು. ಅಲ್ಲಿನ ಕೆಲವು ಶಾಸಕರು ಸ್ವಯಂಪ್ರೇರಣೆಯಿಂದ ಪಿಂಚಣಿ ಬೇಡ ಎಂದಿದ್ದರು. ಪಂಜಾಬಲ್ಲಿ ಆಮ್ ಆದ್ಮಿ ಪಕ್ಷದ ಭಗವಂತ್ ಮಾನ್ ನಿರ್ಧಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಶಿರೋಮಣಿ ಅಕಾಲಿದಳ ಸ್ವಾಗತಿಸಿದೆ. ಭಗವಂತ್ ಮಾನ್ ಸರಕಾರ ಇತ್ತೀಚೆಗೆ ಭಗತ್ ಸಿಂಗ್ ಬಲಿದಾನ ದಿನದಂದು ಸರಕಾರಿ ರಜೆ ಘೋಷಣೆ ಮಾಡಿದ್ದಲ್ಲದೆ, ಭ್ರಷ್ಟಾಚಾರ ತಡೆಗೆ ಸಹಾಯವಾಣಿ ಆರಂಭಿಸಿದ್ದರು. ಆಮೂಲಕ ಭ್ರಷ್ಟಾಚಾರ ತಡೆಗೆ ಆಪ್ ಸರಕಾರ ಮೊದಲ ಹೆಜ್ಜೆ ಇಟ್ಟಿತ್ತು.
Punjab chief minister Bhagwant Mann has announced that former MLAs in the state would now get a pension for one term only and that family allowances of MLAs would also be reduced so that the money saved can be spent on the welfare of the people.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm