ಬ್ರೇಕಿಂಗ್ ನ್ಯೂಸ್
02-08-20 03:05 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 2: ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಸಂಪರ್ಕಿತರ ಬಗ್ಗೆ ಆರೋಗ್ಯ ಅಧಿಕಾರಿಗಳು ನಿಗಾ ಇಟ್ಟಿದ್ದಾರೆ. ಪಾಸಿಟಿವ್ ಆದ ಕೆಲವು ದಿನದ ಹಿಂದಷ್ಟೇ ಅಮಿತ್ ಷಾ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆಸಿದ್ದರು ಎನ್ನಲಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

ಆದರೆ ಪ್ರಧಾನ ಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲನೆ ಮಾಡಲಾಗಿತ್ತು. ಅಧಿಕಾರಿಗಳು ಮತ್ತು ಸಚಿವರು ಮಾಸ್ಕ್ ಧರಿಸಿದ್ದಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಕಳೆದ ಕೆಲವು ತಿಂಗಳುಗಳಿಂದ ಕೋವಿಡ್ ನಿಯಮಗಳನ್ನು ಕಡ್ಡಾಯ ಪಾಲನೆ ಮಾಡಲಾಗುತ್ತಿದ್ದು ಸಂಪೂರ್ಣ ತಪಾಸಣೆ ನಡೆಸಿದ ಬಳಿಕವಷ್ಟೇ ಒಳಗೆ ಬಿಡಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
ಹಾಗಿದ್ದರೂ, ಅಮಿತ್ ಷಾ ಸ್ವತಃ ತನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಪಾಸಣೆಗೆ ಒಳಗಾಗುವಂತೆ ಸೂಚನೆ ನೀಡಿದ್ದಾರೆ. ಈ ನಡುವೆ, ಅಮಿತ್ ಷಾಗೆ ಸೋಂಕು ಹೇಗೆ ಹರಡಿದೆ ಅನ್ನುವ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಚಿವರ ಸಂಪರ್ಕಕ್ಕೆ ಬಂದವರಿಗೆ ಯಾರಿಗಾದ್ರೂ ಸೋಂಕು ಇತ್ತೇ ಅನ್ನುವ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೀಗಾಗಿ ಕೊನೆಯ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಅಧಿಕಾರಿಗಳು ಮತ್ತು ಸಚಿವರು ಈಗ ಕ್ವಾರಂಟೈನ್ ಆಗುವ ಸಾಧ್ಯತೆಯಿದೆ. ಆದಾಗ್ಯೂ ಯಾವಾಗ ಈ ಸಭೆ ನಡೆದಿತ್ತು ಅನ್ನುವುದರ ಬಗ್ಗೆ ಖಚಿತ ಮಾಹಿತಿ ಬಿಟ್ಟುಕೊಟ್ಟಿಲ್ಲ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm