ಬ್ರೇಕಿಂಗ್ ನ್ಯೂಸ್
29-03-22 12:36 pm HK Desk news ದೇಶ - ವಿದೇಶ
ನವದೆಹಲಿ, ಮಾ.29: ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್, ಬಿಜೆಪಿಯ ಹಿಂದುತ್ವದ ರಾಜಕಾರಣವನ್ನು ಟೀಕಿಸಿದ್ದಾರೆ. ನಾನು ರಾಮಾಯಣ, ಗೀತೆಯಲ್ಲಿ ಹೇಳಿರುವ ಹಿಂದುತ್ವವನ್ನು ನಂಬುತ್ತೇನೆ. ರಾಮಾಯಣ ಮತ್ತು ಗೀತೆಯಲ್ಲಿ ಏನು ಹೇಳಲಾಗಿದೆಯೋ ಅದು ಹಿಂದುತ್ವ. ರಾಮಾಯಣದಲ್ಲಿ ಶ್ರೀರಾಮ ಏನು ಹೇಳಿದ್ದಾನೋ ಅದು ಹಿಂದುತ್ವ. ಅದನ್ನು ಮಾತ್ರ ನಾನು ನಂಬುತ್ತೇನೆ ಎಂದು ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಶ್ರೀರಾಮಚಂದ್ರ ಯಾವತ್ತೂ ನಮ್ಮ ನಡುವೆ ದ್ವೇಷ ಹರಡುವುದನ್ನು ಹೇಳಿಲ್ಲ. ಆದರೆ ಬಿಜೆಪಿಯವರು ದಲಿತರನ್ನು ತುಳಿಯುವ, ನಮ್ಮ ನಡುವಿದ್ದವರನ್ನೇ ಹಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಹಿಂದುತ್ವವೇ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿಂದುತ್ವರ ರಾಜಕಾರಣ ಮುಂದಿಟ್ಟು ಗೆದ್ದಿದ್ದಾರಲ್ಲಾ ಎಂಬ ಪ್ರಶ್ನೆಗೆ, ಅಲ್ಲಿ ಪ್ರತಿಸ್ಪರ್ಧಿಗಳೇ ಇರಲಿಲ್ಲ. ಹಾಗಾಗಿ ಗೆದ್ದಿದ್ದಾರೆ ಎಂದು ಹೇಳಿದ್ದಾರೆ.
ಪಂಜಾಬ್ ನಲ್ಲಿ ಐತಿಹಾಸಿಕ ಜಯ ಗಳಿಸಿದ ಬಳಿಕ ಕೇಜ್ರಿವಾಲರ ಪಕ್ಷ ಗುಜರಾತ್ ನತ್ತ ಕಣ್ಣು ನೆಟ್ಟಿದೆ. ಮುಂದಿನ ವರ್ಷ ಗುಜರಾತ್ ನಲ್ಲಿ ಚುನಾವಣೆ ನಡೆಯಲಿದ್ದು, ಆಪ್ ಸ್ಪರ್ಧಿಸಲು ತಯಾರಿ ನಡೆಸಿದೆ. ಗುಜರಾತಿನಲ್ಲಿ ನೀವು ನರೇಂದ್ರ ಮೋದಿಯನ್ನು ಎದುರಿಸಲು ಸಿದ್ಧತೆ ನಡೆಸುತ್ತಿದ್ದೀರಾ ಎಂಬ ಪ್ರಶ್ನೆಗೆ, ನರೇಂದ್ರ ಮೋದಿಯನ್ನು ನಾನು ಟಾರ್ಗೆಟ್ ಮಾಡೋದು ಹೇಗೆ. ಅವರು ನಮ್ಮ ಪ್ರಧಾನಿ. ಇಡೀ ದೇಶದ ಪ್ರಧಾನಿ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರು ಕಾಶ್ಮೀರ್ ಫೈಲ್ಸ್ ಸಿನಿಮಾ ಹೆಸರಲ್ಲಿ ರಾಜಕಾರಣ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಬಿಜೆಪಿ ಸ್ಥಿತಿ ನೋಡಿ ನನಗೆ ನಗು ಬರುತ್ತಿದೆ. ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸುವ ಬದಲು ಅವರು ಗಿಮಿಕ್ ಮಾಡುತ್ತಿದ್ದಾರೆ. ಪಂಡಿತರನ್ನು ಅಣಕಿಸುತ್ತಿದ್ದಾರೆ. ಬಿಜೆಪಿ ಮತ್ತು ಅದರ ಕಾರ್ಯಕರ್ತರು ಕಾಶ್ಮೀರ್ ಫೈಲ್ಸ್ ಸಿನಿಮಾದ ಪೋಸ್ಟರ್ ಅಂಟಿಸುತ್ತಿದ್ದಾರೆ. ಇದು ಯಾವ ರೀತಿಯ ಹೊಸ ರಾಜಕಾರಣವನ್ನು ತೋರಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಪ್ರಶ್ನೆ ಮಾಡಿದ್ದಾರೆ.
32 ವರ್ಷದಲ್ಲಿ ಪುನರ್ವಸತಿ ಮಾಡಕ್ಕಾಗಿಲ್ಲ
ಬಿಜೆಪಿಯ ಕೇಂದ್ರ ನಾಯಕರು ಸಿನಿಮಾ ನಿರ್ಮಾಣ ಮಾಡಿದ್ದಾರೆಯೇ.. ಅವರು ಸಿನಿಮಾ ತಯಾರಿ ಕಾರ್ಯ ಮಾಡಿಲ್ಲ ಎಂದಾದರೆ ಇವರು ಯಾಕೆ ಪೋಸ್ಟರ್ ಹಂಚಬೇಕು. ಪ್ರಮೋಟ್ ಮಾಡಬೇಕು. ನಾನು ಕೂಡ ಸಿನಿಮಾವನ್ನು ಮೆಚ್ಚಿದ್ದೇನೆ. ಅದನ್ನು ಟ್ಟೀಟ್ ಮಾಡಿ ತಿಳಿಸಿದ್ದೇನೆ. ಆದರೆ ಬಿಜೆಪಿ ನಾಯಕರಿಂದ ತೊಡಗಿ ಕಾರ್ಯಕರ್ತರೆಲ್ಲ ಸಿನಿಮಾವನ್ನು ಪ್ರಚಾರ ಮಾಡುತ್ತಿದ್ದಾರೆ. ಕಾಶ್ಮೀರಿ ಪಂಡಿತರಿಗಾದ ಸ್ಥಿತಿಯ ಬಗ್ಗೆ ನೋವಿದೆ. 32 ವರ್ಷ ಕಳೆದರೂ ಏನೂ ಮಾಡೋಕೆ ಆಗಿಲ್ಲ ಅನ್ನುವುದರ ಬಗ್ಗೆ ನೋವು ಇದೆ. ನಾನು ಏನು ಮಾಡೋದಿದ್ದರೂ ದೆಹಲಿ ಒಳಗೆ ಮಾತ್ರ ಮಾಡಬಹುದು. ಕೇಂದ್ರದಲ್ಲಿ ಅಧಿಕಾರದಲ್ಲಿ ಇರುತ್ತಿದ್ದರೆ ಸಿನಿಮಾ ಮಾಡುತ್ತಿರಲಿಲ್ಲ. ಬದಲಿಗೆ, ಕಾಶ್ಮೀರಿ ಪಂಡಿತರ ಕೈ ಹಿಡಿದು ಅವರಿಗೆ ಪುನರ್ವಸತಿ ಮಾಡುತ್ತಿದ್ದೆ ಎಂದು ಮಾರ್ಮಿಕ ಉತ್ತರ ನೀಡಿದ್ದಾರೆ.
CM Arvind Kejriwal said, “I believe in Hindutva that’s in Ramayan, Gita. Whatever is mentioned in Ramayan and Gita is Hindutva. Whatever Lord Ram said in Ramayan is Hindutva.”“Lord Ram never taught us enmity amongst ourselves. But these people are getting Dalits lynched,” CM Kejriwal added.
16-12-25 03:08 pm
Bangalore Correspondent
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
ದೆಹಲಿಯಲ್ಲು ಹೈಕಮಾಂಡ್ ಡಿನ್ನರ್ ಮೀಟಿಂಗ್ ; ಡಿಸಿಎಂ...
15-12-25 02:23 pm
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
16-12-25 01:56 pm
HK News Desk
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
16-12-25 04:26 pm
Udupi Correspondent
ಆವರಣ ಗೋಡೆ ಕಾಮಗಾರಿ ವೇಳೆ ಗುಡ್ಡ ಕುಸಿತ ; ಮಣ್ಣಿನಡಿ...
16-12-25 01:23 pm
Mangalore RTO Bomb: ಮಂಗಳೂರು ಆರ್ಟಿಓ ಕಚೇರಿಗೆ ಬಾ...
15-12-25 05:40 pm
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
15-12-25 10:26 pm
Mangalore Correspondent
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm