ಬ್ರೇಕಿಂಗ್ ನ್ಯೂಸ್
23-09-20 01:13 pm Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಚಂಬರ್ 23: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಒಂದೇ ದಿನ ಸುರಿದ ಮಳೆಯು 26 ವರ್ಷಗಳ ದಾಖಲೆಯನ್ನೇ ಮುರಿದಿದೆ. ಕಳೆದ 24 ಗಂಟೆಗಳಲ್ಲಿ 273.6 ಮಿಮಿ ನಷ್ಟು ಮಳೆ ಸುರಿದಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳವಾರ ಸಂಜೆ ಶುರುವಾದ ವರುಣನ ರೌದ್ರನರ್ತನ ಬುಧವಾರ ಬೆಳಗ್ಗೆವರೆಗೂ ಮುಂದುವರಿದಿದ್ದು, ವರುಣನ ಅಬ್ಬರಕ್ಕೆ ವಾಣಿಜ್ಯನಗರಿ ಈಗಾಗಲೇ ತತ್ತರಿಸಿ ಹೋಗಿದೆ. 1994 ರಿಂದ 2020ರ ಸಪ್ಟೆಂಬರ್ ಅವಧಿಯಲ್ಲಿ ಸುರಿದ 2ನೇ ಅತಿದೊಡ್ಡ ಮಳೆಯಾಗಿದೆ. ಇನ್ನು, 1974 ರಿಂದ 2020 ಸಪ್ಟೆಂಬರ್ ಅವಧಿಯಲ್ಲಿ ಸುರಿದ 4ನೇ ಅತಿದೊಡ್ಡ ಮಳೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಮಳೆಯ ಹೊಡೆತಕ್ಕೆ ರಾತ್ರಿ ಕಳೆದು ಬೆಳಗಾಗುವಷ್ಟರಲ್ಲಿ ಮುಂಬೈ ನಗರದ ಚಿತ್ರಣವೇ ಬದಲಾಗಿದೆ. ಮಳೆ ನೀರಿನ ನಡುವೆ ಸಿಲುಕಿದ ವಾಹನ ಸವಾರರ ಪರದಾಟ, ಮನೆಗಳಿಂದ ಹೊರ ಬರುವುದಕ್ಕೂ ಆಗದಂತೆ ದಿಗ್ಬಂಧನಕ್ಕೆ ಒಳಗಾಗಿರುವ ಜನರು, ಬೆಳ್ಳಂಬೆಳಗ್ಗೆ ಮಳೆಯಿಂದಾಗಿ ಜನಜೀವನ ಸ್ತಬ್ಧಗೊಂಡಿದೆ.

ಕಳೆದ ಮಂಗಳವಾರ ಸಂಜೆಯಿಂದ ಶುರುವಾದ ಮಳೆಯು ರಾತ್ರಿಯಿಡೀ ಸುರಿದಿದೆ. ಕೊಲಂಬಾದಿಂದ ಭಾಯಂದರ್ ವರೆಗಿನ ಮುಂಬೈನ ಸಂಪೂರ್ಣ ಪಶ್ಚಿಮ ಭಾಗದಲ್ಲಿ ದಟ್ಟವಾದ ಮೋಡ ಮುಸುಕಿದ ವಾತಾವರಣವಿದ್ದು, ಮಂಗಳವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ರಾತ್ರಿ 3.30 ರಿಂದ 5.30ರ ನಡುವೆ ಗುಡುಗು ಸಹಿತ ಭಾರಿ ಮಳೆಯಾಗಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಪಶ್ಚಿಮ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಜನರಲ್ ಕೆ.ಎಸ್.ಹೊಸಲಿಕರ್ ತಿಳಿಸಿದ್ದಾರೆ.


ಮುಂಬೈನಲ್ಲಿ ಸುರಿದ ಮಳೆಯಿಂದ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ರದ್ದುಗೊಳಿಸಲಾಗಿದೆ. ಠಾಣೆಯ ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ಮತ್ತು ಛತ್ರಪತಿ ಶಿವಾಜಿ ಮಹಾರಾಜ ಟರ್ಮಿನಸ್ ವಶಿ ನಡುವಿನ ರೈಲ್ವೆ ಸಂಚಾರವು ಬಂದ್ ಆಗಿದೆ. ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು ಸಿಯಾನ್-ಕುರ್ಲಾ, ಚುನಭಟ್ಟಿ ಕುರ್ಲಾ ಮತ್ತು ಮಸೀದ್ ಸಬ್ ಅರ್ಬನ್ ರೈಲ್ವೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ದೂರದ ರೈಲುಗಳ ಸಂಚಾರ ಬಂದ್ ಅಥವಾ ಸಮಯ ಬದಲಾವಣೆ ಮಾಡಲಾಗುತ್ತದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am