ಬ್ರೇಕಿಂಗ್ ನ್ಯೂಸ್
04-04-22 07:21 pm HK Desk news ದೇಶ - ವಿದೇಶ
ನವದೆಹಲಿ, ಎ.4: ಮೊನ್ನೆಯಷ್ಟೇ ಐಪಿಎಸ್ ಅಧಿಕಾರಿ ಹುದ್ದೆಯಿಂದ ನಿವೃತ್ತಿಯಾದ ಭಾಸ್ಕರ ರಾವ್ ರಾಜಕೀಯಕ್ಕೆ ಧುಮುಕಿದ್ದಾರೆ. ಭಾಸ್ಕರ ರಾವ್ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದ ಭಾಸ್ಕರ ರಾವ್ ಕಳೆದ 2021ರ ಸೆಪ್ಟಂಬರ್ 21ರಂದು ತಮ್ಮ ಸ್ಥಾನಕ್ಕೆ ಸ್ವಯಂ ನಿವೃತ್ತಿ ಪಡೆಯುವುದಾಗಿ ಹೇಳಿ ರಾಜಿನಾಮೆ ಪತ್ರ ನೀಡಿದ್ದರು. ಆದರೆ, ರಾಜಿನಾಮೆ ಪತ್ರ ಸರಕಾರದ ಕಡೆಯಿಂದ ಸ್ವೀಕಾರ ಆಗಿರಲಿಲ್ಲ. ಸುದೀರ್ಘ ಎಂಟು ತಿಂಗಳು ಕಳೆದ ಬಳಿಕ ವಾರದ ಹಿಂದೆ ರಾಜಿನಾಮೆ ಸ್ವೀಕೃತ ಆಗಿತ್ತು.

ಕಳೆದ ಬಾರಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಭಾಸ್ಕರ ರಾವ್ ಅವರನ್ನು ಬೆಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು. ಹೀಗಾಗಿ ಭಾಸ್ಕರ ರಾವ್ ಸ್ವಯಂ ನಿವೃತ್ತಿಯಾಗುತ್ತಿದ್ದಂತೆ ಬಿಜೆಪಿ ಸೇರಲಿದ್ದಾರೆ ಎಂದೇ ಹೇಳಲಾಗಿತ್ತು. ಕೆಲವು ಮೂಲಗಳು ಭಾಸ್ಕರ ರಾವ್ ಕಾಂಗ್ರೆಸ್ ಸೇರುವ ಇರಾದೆ ಹೊಂದಿದ್ದಾರೆ ಎನ್ನುತ್ತಿದ್ದವು. ಆದರೆ ಭಾಸ್ಕರ ರಾವ್ ಮಾತ್ರ ಈ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಟ್ಟಿರಲಿಲ್ಲ.
ಭಾಸ್ಕರ ರಾವ್ ಬೆಂಗಳೂರು ಕಮಿಷನರ್ ಆಗಿದ್ದಾಗಲೇ ಸ್ಯಾಂಡಲ್ವುಡ್ಡಿನ ಡ್ರಗ್ಸ್ ನಂಟನ್ನು ಹೊರಗೆಳೆಯಲಾಗಿತ್ತು. ಸಿನಿ ತಾರೆಯರು ಸೇರಿದಂತೆ ಹೈಪ್ರೊಫೈಲ್ ಮಂದಿಯ ಹೆಸರು ಡ್ರಗ್ಸ್ ವಹಿವಾಟಿನಲ್ಲಿ ಶಾಮೀಲಾಗಿದ್ದು ಕಂಡುಬಂದಿತ್ತು. ಡ್ರಗ್ಸ್ ಪ್ರಕರಣದ ಬಗ್ಗೆ ಕರಾಳತೆ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದ ಮೊದಲ ಕಮಿಷನರ್ ಕೂಡ ಭಾಸ್ಕರ ರಾವ್ ಆಗಿದ್ದರು. ಹೀಗಾಗಿ ಅವರ ಜನಪ್ರಿಯತೆಯೂ ಹೆಚ್ಚಿತ್ತು.

ಪಂಜಾಬ್ ಗೆಲುವಿನ ಬಳಿಕ ಹೊಸ ಹುಮ್ಮಸ್ಸಿನಲ್ಲಿರುವ ಆಮ್ ಆದ್ಮಿ ಪಾರ್ಟಿ ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಪ್ರಭಾವಿ ನಾಯಕರನ್ನು ಬರಸೆಳೆದುಕೊಂಡು ಸ್ಪರ್ಧೆಗೆ ತಯಾರಿ ನಡೆಸುತ್ತಿದೆ. ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಈಗಾಗಲೇ ಪ್ರಭಾವಿಗಳು ನಮ್ಮ ಪಕ್ಷ ಸೇರಲಿದ್ದಾರೆ ಎಂಬ ಸುಳಿವು ನೀಡಿದ್ದಾರೆ. ಇದೀಗ ಭಾಸ್ಕರ ರಾವ್ ದೆಹಲಿಯಲ್ಲೇ ಆಪ್ ಪಕ್ಷ ಸೇರಿದ್ದು, ಬೆಂಗಳೂರಿನ ಬಸವನಗುಡಿ ಕ್ಷೇತ್ರದಲ್ಲಿ ವಿಧಾನಸಭೆಗೆ ಸ್ಪರ್ಧಿಸಲು ಒಲವು ತೋರಿದ್ದಾರೆ. ಬಸವನಗುಡಿ ಕ್ಷೇತ್ರದಲ್ಲಿ ಬಿಜೆಪಿ ಪ್ರಾಬಲ್ಯ ಹೊಂದಿದ್ದು, ಅದರ ಪ್ರಾಬಲ್ಯ ಮುರಿಯಲು ವರ್ಷದ ಮೊದಲೇ ಕ್ಷೇತ್ರದಲ್ಲಿ ಚುನಾವಣೆ ಸಿದ್ಧತೆಗೆ ಭಾಸ್ಕರ ರಾವ್ ತೊಡಗಲಿದ್ದಾರೆ.
B Bhaskar Rao, a 1990-batch Karnataka cadre IPS officer and a native of Bengaluru, joined the Aam Aadmi Party (AAP) here on Monday after serving the police force for 32 years in various capacities.He was welcomed to the party fold by senior AAP leader and Delhi Deputy Chief Minister Manish Sisodia.AAP's Karnataka unit convenor Prithvi Reddy, election in-charge for the state and Timarpur MLA Dilip Pandey, organisation secretary Damodaran and other leaders were present on the occasion at the party headquarters here.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm