ಬ್ರೇಕಿಂಗ್ ನ್ಯೂಸ್
05-04-22 12:12 pm HK Desk news ದೇಶ - ವಿದೇಶ
ಕೋಜಿಕ್ಕೋಡ್, ಎ.5 : ಹೊಳೆಯ ನಡುವೆ ಬಂಡೆಯಲ್ಲಿ ನಿಂತು ಪೋಸ್ಟ್ ವೆಡ್ಡಿಂಗ್ ಫೋಟೋ ಶೂಟ್ ಮಾಡುತ್ತಿದ್ದಾಗ ಮದುಮಗ ಬಂಡೆಯಿಂದ ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೋಜಿಕ್ಕೋಡ್ ಜಿಲ್ಲೆಯ ಕುತ್ಯಾಡಿ ನದಿಯಲ್ಲಿ ನಡೆದಿದೆ.
ಮೂರು ವಾರಗಳ ಹಿಂದಷ್ಟೇ ವಿವಾಹಿತರಾಗಿದ್ದ ರೆಜಿನ್ ಲಾಲ್ ಮತ್ತು ಕಾನಿಕಾ ದಂಪತಿ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್ ಮಾಡಿಸುತ್ತಿದ್ದರು. ಹೊಳೆಯ ಮಧ್ಯದ ಬಂಡೆ ಮೇಲೆ ನಿಂತು ಪೋಸು ಕೊಡುತ್ತಿದ್ದ ವೇಳೆ ವರ ರೆಜಿನ್ ಕಾಲು ಜಾರಿ ನದಿಗೆ ಬಿದ್ದಿದ್ದಾನೆ. ಈ ವೇಳೆ ವಧು ಕೂಡ ನೀರಿಗೆ ಬಿದ್ದಿದ್ದು ಸ್ಥಳೀಯರು ಸೇರಿ ಇಬ್ಬರನ್ನೂ ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವರ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದು ವಧು ಗಂಭೀರ ಸ್ಥಿತಿಯಲ್ಲಿದ್ದಾಳೆ. ಮಾರ್ಚ್ 14 ರಂದು ಇವರ ವಿವಾಹ ನಡೆದಿತ್ತು.
ಪೆರುವಣ್ಣಮುಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರ ರೆಜಿನ್ ಕುಟ್ಟಿಯಾಡಿ ಪರಿಸರದ ನಿವಾಸಿಯಾಗಿದ್ದು ನದಿಯ ಅಪಾಯದ ಬಗ್ಗೆ ಅರಿವು ಹೊಂದಿದ್ದ. ನದಿಯಲ್ಲಿ ಆಗಿಂದಾಗ್ಗೆ ಅಲೆಗಳು ಬರುವುದು, ಬಂಡೆಗೆ ಅಪ್ಪಳಿಸುವುದರಿಂದ ಅಪಾಯ ಎಂದು ಬೋರ್ಡ್ ಹಾಕಲಾಗಿತ್ತು. ಕುಟ್ಟಿಯಾಡಿಯ ಜಾನಕಿಪುಝ ಹೊಳೆಯ ಮಧ್ಯೆ ದಂಪತಿ ಫೋಟೋ ಶೂಟ್ ಮಾಡುತ್ತಿದ್ದರು.
ಬಂಡೆಗಳ ಆಕರ್ಷಣೆಯ ನಡುವೆ ಆಳವಾದ ಹೊಂಡವಿದೆ. ಹಾಗಾಗಿ ಅಲ್ಲಿಗೆ ತೆರಳುವುದು ಅಪಾಯ ಎಂದು ಸೂಚನೆ ನೀಡಲಾಗಿತ್ತು. ಇಕೋ ಟೂರಿಸಂ ಹೆಸರಲ್ಲಿ ಫೋಟೋ ಶೂಟ್ ಮಾಡಲೆಂದು ಪ್ರವಾಸಿಗರು ಬರುತ್ತಿದ್ದರು. ಆದರೆ ಸ್ಥಳೀಯ ವ್ಯಕ್ತಿಯೇ ಆಗಿರುವ ರೆಜಿನ್, ಅದೇ ಹೊಳೆಯಲ್ಲಿ ನೀರಿಗೆ ಬಿದ್ದು ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ. ಇದೇ ಜಾಗದಲ್ಲಿ ಈ ಹಿಂದೆಯೂ ದುರಂತ ಸಂಭವಿಸಿದ್ದರಿಂದ ಫೋಟೋ ಶೂಟ್ ಮಾಡದಂತೆ ನಿಷೇಧ ಹಾಕಲಾಗಿತ್ತು.
A post-wedding shoot has turned tragic for a groom, who drowned in the Kuttiadipuzha in Kozhikode. The accident happened at Janakikadupuzha in Kuttiadi, Kozhikode. The dead has been identified as Rejil of Kadiyangad in Kuttiadi. Though his wife got stuck in the water currents, was able to save her. She has been admitted in the hospital in a serious condition.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm