ಬ್ರೇಕಿಂಗ್ ನ್ಯೂಸ್
10-04-22 07:27 pm HK Desk news ದೇಶ - ವಿದೇಶ
ಇಸ್ಲಮಾಬಾದ್, ಎ.10: ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮೂಲಕ ಪಾಕಿಸ್ಥಾನ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಪದಚ್ಯುತಿ ಮಾಡಲಾಗಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷ ಪಾಕಿಸ್ಥಾನ್ ಮುಸ್ಲಿಂ ಲೀಗ್ – ನವಾಜ್ (ಪಿಎಂಎಲ್-ಎನ್) ಪಕ್ಷದ ಅಧ್ಯಕ್ಷ ಶೆಹಬಾಜ್ ಷರೀಫ್ ಸ್ವತಃ ಪಾಕಿಸ್ಥಾನದ ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿಕೊಂಡಿದ್ದಾರೆ.
ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಶೆಹಬಾಜ್ ಷರೀಫ್ (70) ಪ್ರಧಾನಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಮೂರು ಬಾರಿ ಪಾಕಿಸ್ಥಾನದ ಪ್ರಧಾನಿಯಾಗಿದ್ದ ನವಾಜ್ ಶರೀಫ್ ದೇಶ ಬಿಟ್ಟು ಹೋದ ಬಳಿಕ ಅವರ ತಮ್ಮನಾಗಿರುವ ಶೆಹಬಾಜ್ ಷರೀಫ್ ಪಕ್ಷದ ನೇತೃತ್ವ ವಹಿಸಿಕೊಂಡಿದ್ದರು. ಮುಸ್ಲಿಂ ಲೀಗ್ ಪಕ್ಷವನ್ನು ನವಾಜ್ ಶರೀಫ್ ಹೆಸರಲ್ಲಿಯೇ ಮುನ್ನಡೆಸಿದ್ದರು.

ಇತ್ತೀಚೆಗೆ ಪಾಕಿಸ್ಥಾನದಲ್ಲಿ ಬಿಕ್ಕಟ್ಟು ಎದುರಾದ ಬಳಿಕ ವಿರೋಧ ಪಕ್ಷಗಳ ಜಂಟಿ ಸಭೆಯಲ್ಲಿ ಪಾಕಿಸ್ಥಾನ್ ಪೀಪಲ್ಸ್ ಪಾರ್ಟಿ ಅಧ್ಯಕ್ಷ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರು ಪ್ರಧಾನಿ ಸ್ಥಾನಕ್ಕೆ ಶೆಹಬಾಜ್ ಶರೀಫ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಇದೇ ವೇಳೆ ಇಮ್ರಾನ್ ಖಾನ್ ಅವರ ಪಾಕಿಸ್ಥಾನ್ ಇ-ತೆಹ್ರೀಕ್ ಪಕ್ಷವು ಪ್ರಧಾನಿ ಸ್ಥಾನಕ್ಕೆ ವಿದೇಶಾಂಗ ಸಚಿವ ಷಾ ಮೆಹಬೂಬ್ ಖುರೇಷಿ ಅವರನ್ನು ಆಯ್ಕೆ ಮಾಡಿದೆ.

342 ಸದಸ್ಯ ಬಲದ ಸಂಸತ್ತಿನಲ್ಲಿ ಭಾನುವಾರ ಬೆಳಗ್ಗೆ ಇಮ್ರಾನ್ ಖಾನ್ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿದವು. ಅವಿಶ್ವಾಸದ ಪರವಾಗಿ 174 ಮತಗಳು ಚಲಾವಣೆಯಾಗಿದ್ದು, ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಿಂದ ಹೊರ ನಡೆಯಬೇಕಾಯಿತು. ಇಮ್ರಾನ್ ಖಾನ್ ಪದಚ್ಯುತಿ ಬೆನ್ನಲ್ಲೇ ಇಮ್ರಾನ್ ಆಪ್ತರ ಮನೆಗಳಿಗೆ ಕೇಂದ್ರೀಯ ತನಿಖಾ ತಂಡವು ದಾಳಿ ನಡೆಸಿದೆ.
Pakistan’s Prime Minister Imran Khan was ousted early on Sunday, April 10, when he lost a vote of confidence in parliament, after being deserted by coalition partners who blame him for a crumbling economy and failure to deliver on his campaign promises.Candidates for Pakistan’s next prime minister are due to file nomination papers on Sunday, with reports calling Nawaz Sharif’s brother Shehbaz a frontrunner.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm