ಬ್ರೇಕಿಂಗ್ ನ್ಯೂಸ್
02-08-20 04:47 pm Headline Karnataka News Network ದೇಶ - ವಿದೇಶ
ನವದೆಹಲಿ: ಬೇಕಾಬಿಟ್ಟಿಯಾಗಿ ಪಿಪಿಇ ಕಿಟ್ ಎಸೆದಿದ್ದ ಕೊರೊನಾ ಸೋಂಕಿತನ ವಿರುದ್ಧ ಪ್ರಕರಣ ದಾಖಲಿಸುವ ಮೂಲಕ ಪಾಠ ಕಲಿಸಲಾಗಿದೆ.
ದಕ್ಷಿಣ ದೆಹಲಿಯ ಸಿ.ಆರ್.ಪಾರ್ಕ್ ಬಳಿ ಘಟನೆ ನಡೆದಿದ್ದು, ಸೋಂಕಿತನ ವಿರುದ್ಧ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಗುಣಮುಖವಾದ ತಕ್ಷಣ ಆತನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್ ಸಂಗೀತ ಸಂಯೋಜಕ ಶಾಂತನು ಮೊಯಿತ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ವಿಡಿಯೋ ಆಧರಿಸಿ ಪೊಲೀಸರು ಎಚ್ಚೆತ್ತುಕೊಂಡು ಪ್ರಕರಣ ದಾಖಲಿಸಿದ್ದಾರೆ.
This is a video of a house in C.R.Park Delhi, A 98 with likely COVID patients disposing there PPE kits in the gully behind ...this is hazardous and dangerous. Many senior citizens live here and r petrified. Authorities please look into this urgently 🙏🙏 @AtishiAAP pic.twitter.com/lub7QVMC8G
— Shantanu Moitra (@ShantanuMoitra) July 30, 2020
ಸೋಂಕಿತನ ಮನೆಯ ಸುತ್ತ ಹಲವು ವೃದ್ಧರಿದ್ದಾರೆ. ಕೊರೊನಾ ಸೋಂಕಿತರು ಈ ರೀತಿ ಪಿಪಿಇ ಕಿಟ್ ರಸ್ತೆಗೆ ಎಸೆದರೆ ಏನು ಗತಿ ಎಂದು ಜಾಲತಾಣಗಳಲ್ಲಿ ಪ್ರಶ್ನಿಸಲಾಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕಲ್ಕಾಜಿ ಎಎಪಿ ಶಾಸಕ ಅತಿಶಿ ಮರ್ಲೆನಾ ಅವರಿಗೆ ಟ್ಯಾಗ್ ಮಾಡಿ ಮೊಯಿತ್ರಾ ಟ್ವೀಟ್ ಮಾಡಿದ್ದರು. ಈ ಗಲ್ಲಿಯಲ್ಲಿ ಯಾರೋ ಪಿಪಿಇ ಕಿಟ್ ಎಸೆದಿದ್ದಾರೆ. ಇದು ಬಹುಶಃ ಕೊರೊನಾ ಸೋಂಕಿತರ ಪಿಪಿಇ ಕಿಟ್ ಇರಬಹುದು. ಇದು ತುಂಬಾ ಅಪಾಯಕಾರಿ. ಈ ಭಾಗದಲ್ಲಿ ತುಂಬಾ ಜನ ಹಿರಿಯ ನಾಗರಿಕರಿದ್ದಾರೆ. ಅಧಿಕಾರಿಗಳು ತುರ್ತಾಗಿ ಇದನ್ನು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೆಹಲಿ ಪೊಲೀಸರು ಈ ಕುರಿತು ತನಿಖೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಸೋಂಕಿತ ಗುಣಮುಖವಾಗುತ್ತಿದ್ದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 12:24 pm
Mangalore Correspondent
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm