ಬ್ರೇಕಿಂಗ್ ನ್ಯೂಸ್
25-09-20 02:56 pm Headline Karnataka News Network ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 25: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆ ಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು ಎಂದು ಎಸ್ಪಿಬಿ ಸಾಧನೆಯ ಬಗ್ಗೆ ಹೇಳಿದ್ದಾರೆ.
ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಆದರೆ ಇದೀಗ ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. (1/3) pic.twitter.com/DZmWjJU5AR
— B.S. Yediyurappa (@BSYBJP) September 25, 2020
ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ. (3/3) pic.twitter.com/S6SHgjPJVy
— B.S. Yediyurappa (@BSYBJP) September 25, 2020
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
21-10-25 10:51 pm
Mangalore Correspondent
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm