ಎಸ್​​ಪಿಬಿ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ಬಡವಾಗಿದೆ: ನರೇಂದ್ರ ಮೋದಿ

25-09-20 04:38 pm       Headline Karnataka News Network   ದೇಶ - ವಿದೇಶ

ದೇಶದ ಮಹಾನ್ ಗಾಯಕ ಎಸ್​​ಪಿ ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ನವದೆಹಲಿ, ಸೆಪ್ಟಂಬರ್ 25: ದೇಶದ ಮಹಾನ್ ಗಾಯಕ ಎಸ್​​ಪಿ ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಎಸ್​​.ಪಿ ಬಾಲಸುಬ್ರಮಣ್ಯಂ ಅವರ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತು ತುಂಬಾ ಬಡವಾಗಿದೆ. ದೇಶದಾದ್ಯಂತ ಮನೆ ಮಾತಾಗಿದ್ದ ಎಸ್​ಪಿಬಿ ಅವರ ಸುಮಧುರ ಕಂಠ ಹಾಗೂ ಅವರ ಸಂಗೀತ ದಶಕಗಳವರೆಗೆ ಅಭಿಮಾನಿಗಳ ಮನಸೂರೆಗೊಳಿಸಿತ್ತು. ಈ ದುಃಖದ ಸಂದರ್ಭದಲ್ಲಿ ಅವರ ಕಟುಂಬಸ್ಥರು ಹಾಗೂ ಅಭಿಮಾನಿಗಳಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

Join our WhatsApp group for latest news updates (2)